ದಾವಣಗೆರೆ: ಕುಡಿದ ಅಮಲಿನಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ದೌರ್ಜನ್ಯ; ಚಾಕುವಿನಿಂದ ಇರಿದು ಪರಾರಿಯಾದ ವ್ಯಕ್ತಿ..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಚಾಕು ಏರಿದು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನ ಹಟ್ಟಿಯಲ್ಲಿ ನಡೆದಿದೆ. ಅಮಲಿಲ್ಲಿ ಮಗುವಿಗೆ ಹಾಲುಣಿಸುತ್ತಿದ್ದ ಮಹಿಳೆಯನ್ನ ಎಳೆದಾಡಿದ್ದು, ಆಕೆ ವಿರೋಧಿಸಿದ್ದಕ್ಕೆ ಚಾಕು ಇರಿದು ಪರಾರಿಯಾಗಿದ್ದಾನೆ.

ಮಹಿಳೆ ಮನೆಯಲ್ಲಿ ಮಗುವಿಗೆ ಹಾಲುಣಿಸುವ ವೇಳೆ ಕುಡಿದ ಮತ್ತಲ್ಲಿದ್ದ ಅದೇ ಗ್ರಾಮದ ಕಾಟೇಶ ಎಂಬ ವ್ಯಕ್ತಿ ಮನೆಗೆ ನುಗ್ಗಿ, ಮಹಿಳೆಯನ್ನ ಎಳೆದಾಡಿದ್ದಾನೆ. ಮಹಿಳೆ ಪ್ರತಿರೋಧ ತೋರಿದ್ದರಿಂದ ಆಕೆಯ ಕುತ್ತಿಗೆ, ಎದೆ, ಕೈಗೆ ಚಾಕುವಿನಿಂದ ಇರಿದಿದ್ದಾನೆ. ಮಹಿಳೆ ಜೋರಾಗಿ ಕೂಗಿದ್ದರೀಂದ ನೆರೆಯವರು ಬಂದು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯಕ್ಕೆ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಕಾಟೇಶಗಾಗಿ ಪೋಲಿಸರ ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಜಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

ದಾವಣಗೆರೆ: ಪಹಣಿ-ಆಧಾರ್ ಜೋಡಣೆ; ಜಿಲ್ಲೆಗೆ ಪ್ರಥಮ ಸ್ಥಾನ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *