ದಾವಣಗೆರೆ: ಸಿರಿಧಾನ್ಯ ನವಣೆ ಬೆಳೆಯ ಸಮಗ್ರ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಿರಿಧಾನ್ಯ ನವಣೆ ಬೆಳೆಯಲ್ಲಿ ಅಧಿಕ ಇಳುವರಿ ಕೊಡುವ ಹಾಗೂ ಬರ ನಿರೋಧಕ ತಳಿಯಾದ HN-46 ತಳಿ ಮುಂಗಾರಿಗೆ ಸೂಕ್ತ ಎಂದರು ತರಳಬಾಳು ಕೆವಿಕೆ ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿ. ಓ. ಅಭಿಪ್ರಾಯಪಟ್ಟರು.

ಜಗಳೂರು ತಾಲೂಕು ಕಲ್ಲೇದೇವರಪುರ ಗ್ರಾಮದಲ್ಲಿ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ನವಣೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆಯ ತರಬೇತಿ ಕಾರ್ಯಕ್ರಮಉದ್ಘಾಟಿಸಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಗಳ ಬೆಳೆಯ ವಿಸ್ತರಣೆ ಕಡಿಮೆಯಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಕಡಿಮೆ ಇಳುವರಿ. ನವಣೆ ಪ್ರಮುಖ ಒಂದು ಸಿರಿಧಾನ್ಯ ಬೆಳೆ, ನವಣೆ ಬೆಳೆಯಲ್ಲಿ ಇತ್ತೀಚಿಗೆ ಬಿಡುಗಡೆಯಾದ ನವೀನ ತಳಿಯಾದ ಎಚ್ ಎನ್-46, ಪ್ರತಿ ಎಕರೆಗೆ ನಾಲ್ಕು ಕೆಜಿ ಬೀಜ ಬೇಕಾಗುತ್ತದೆ‌. ಜೈವಿಕ ಗೊಬ್ಬರಗಳಾದ ಅಜೋಸ್ಪಿರಿಲಂ ಮತ್ತು ರಂಜಕ ಕರಗಿಸುವ ಬ್ಯಾಕ್ಟೀರಿಯ 200 ಗ್ರಾಂ ಪ್ರತಿ ಎಕರೆ ಬೀಜಕ್ಕೆ ಬಿಜೋಪಚಾರ ಮಾಡಿ ಬಿತ್ತನೆ ಮಾಡಬೇಕು ಎಂದರು.

ಕ ಮಣ್ಣು ವಿಜ್ಞಾನಿ ಎಚ್ ಎಮ್ ಸಣ್ಣ ಗೌಡರ ಮಾತನಾಡಿ, ಜೈವಿಕ ಗೊಬ್ಬರದ ಬಳಕೆಯಿಂದ ರಾಸಾಯನಿಕ ಗೊಬ್ಬರದ ಅವಲಂಬನೆಯನ್ನು ಕಡಿಮೆ ಮಾಡಬಹುದು ಎಂದರು. ತರಬೇತಿ ಕಾರ್ಯಕ್ರಮದಲ್ಲಿ ಸಸ್ಯ ಸಂರಕ್ಷಣಾ ತಜ್ಞ ಡಾ. ಅವಿನಾಶ್ ಟಿಜಿ, ಬಿದರಿಕೆರೆ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಕೃಷ್ಣಮೂರ್ತಿ, ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು. ಮುಂಜಾನೆಯ ಪ್ರಾತ್ಯಕ್ಷಿಕೆಯ ಅಂಗವಾಗಿ ಆಯ್ದ 10 ಪ್ರಗತಿಪರ ರೈತರಿಗೆ ನವಣೆ ಬೀಜ ಮತ್ತು ಜೈವಿಕ ಗೊಬ್ಬರಗಳನ್ನು ಕೊಡಲಾಯಿತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *