Connect with us

Dvgsuddi Kannada | online news portal | Kannada news online

ಮೂರಲ್ಲ, ಐದು ಡಿಸಿಎಂ ಮಾಡಲಿ; ಮೊದಲು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಮಾಡಿ; ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ

shivaganga basavaraju

ದಾವಣಗೆರೆ

ಮೂರಲ್ಲ, ಐದು ಡಿಸಿಎಂ ಮಾಡಲಿ; ಮೊದಲು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಮಾಡಿ; ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ

ದಾವಣಗೆರೆ: ಮೂರಲ್ಲ, ಐದು, 10, 15 ಜನರನ್ನು ಉಪ ಮುಖ್ಯಮಂತ್ರಿ ಮಾಡಿ ಅಥವಾ ಜಾತಿಗೊಬ್ಬ ಉಪ ಮುಖ್ಯಮಂತ್ರಿ ಮಾಡಿದರೂ ನಮ್ಮ ವಿರೋಧವಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಆಧಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅನೇಕ ಬೇಡಿಕೆಯಿಡುತ್ತಿದ್ದಾರೆ. ಡಿಸಿಎಂ ವಿಚಾರ ಪದೇ ಪದೇ ಪ್ರಸ್ತಾಪ ಮಾಡುತ್ತಲೇ ಇದ್ದಾರೆ. ನಾವೂ ಹಿರಿಯರನ್ನು ಅನುಸರಿಸಬೇಕಾಗುತ್ತದೆ. ಎಷ್ಟು ಬೇಕಾದರೂ ಡಿಸಿಎಂ ಹುದ್ದೆ ಸೃಷ್ಟಿಸಲಿ. ಮೊದಲು ಡಿ.ಕೆ. ಶಿವಕುಮಾರ ಸಾಹೇಬರನ್ನು ಮುಖ್ಯಮಂತ್ರಿ ಮಾಡಲಿ ಎಂದರು.

ಲೋಕಸಭೆ ಚುನಾವಣೆ ಮುಗಿದಿದೆ. ಈಗ ಉಪ ಮುಖ್ಯಮಂತ್ರಿ ಹುದ್ದೆ ವಿಚಾರ ಸರಿ ಅಲ್ಲ. ಕೆಲ ಹಿರಿಯ ನಾಯಕರು ಮೂರು ಡಿಸಿಎಂ ಹುದ್ದೆಗೆ ಬೇಡಿಕೆ ಇಡುತ್ತಿದ್ದಾರೆ. ಮೊದಲು ಡಿ.ಕೆ. ಶಿವಕುಮಾರ ಸಾಹೇಬರನ್ನು ಪಕ್ಷ ಸಂಘಟನೆಯನ್ನು ಗುರುತಿಸಿ, ಉಪ ಮುಖ್ಯಮಂತ್ರಿಯಾಗಿ ಮಾಡಿದೆಯೇ ಹೊರತು, ಜಾತಿಯ ಆಧಾರದಲ್ಲಿ ಮಾಡಿಲ್ಲ. ಈಗ ಮುಖ್ಯಮಂತ್ರಿ ಮಾಡಿ ಐದು ಡಿಸಿಎಂ ಹುದ್ದೆ ಸೃಷ್ಟಿಸಲಿ, ಸಂಪುಟ ಪುನಾರಚನೆ ಮಾಡಲಿ ಎಂದು ತಿಳಿಸಿದರು. ತಿಳಿಸಿದರು.

ಎಲ್ಲಾ ಸಮುದಾಯಗಳೂ ಕಾಂಗ್ರೆಸ್ಸಿಗೆ ಮತ ನೀಡಿದ್ದಾರೆ. ಸಣ್ಣ ಜಾತಿಗಳು ಮತ ಹಾಕಿವೆ. ಎಲ್ಲಾ ಜಾತಿಗೂ ಡಿಸಿಎಂ ಮಾಡಿ, ನ್ಯಾಯ ಕೊಡಲಿ. ಡಿ.ಕೆ.ಶಿವಕುಮಾರ್ ಅವರನ್ನು ಮೊದಲು ಮುಖ್ಯಮಂತ್ರಿ ಮಾಡಿ ಎಷ್ಟಾದರೂ ಡಿಸಿಎಂ ಮಾಡಲಿ.ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top