ದಾವಣಗೆರೆ: ಜಿಲ್ಲೆಯ ವಿವಿಧ ಕಡೆ ಜೂಜು ಅಡ್ಡೆ ಮೇಲೆ ಜಿಲ್ಲಾ ಪೊಲೀಸರ ದಾಳಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ವಿವಿಧ ಕಡೆ ಮಟ್ಕಾ ಜೂಜಾಟ ಅಡ್ಡೆ ಮೇಲೆ ಜಿಲ್ಲಾ ಪೊಲೀಸರು ದಾಳಿ ಮಾಡಿದ್ದು, ಪ್ರಕರಣದ ಆರೋಪಿಗಳು ಹಾಗೂ ಹಣ ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ನಗರದ ಪಿ ಜೆ ಬಡಾವಣೆಯ ರಾಮ ಮಂದಿರ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ ಅವರಿಗೆ ‌ಬಂದ ಖಚಿತ ಮಾಹಿತಿ ಮೇರೆಗೆ ಡಿಸಿಆರ್ ಬಿ ಘಟಕದ ಸಿಬ್ಬಂದಿಗಳ ತಂಡಕ್ಕೆ ದಾಳಿಗೆ ಸೂಚನೆ ನೀಡಿದ್ದು, ಸದರಿ ತಂಡವು ಮೇಲ್ಕಂಡ ಮಟ್ಕಾ ಜೂಜಾಟದ ಸ್ಥಳದ ಮೇಲೆ ದಾಳಿ ಮಾಡಿದ್ದು, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿತನನ್ನು ವಶಕ್ಕೆ ಪಡೆಯಲಾಗಿದೆ‌ ಆರೋಪಿಗಳಿಂದ ಜೂಜಾಟನಲ್ಲಿ ತೊಡಗಿಸಿದ್ದ 5858/- ರೂ ನಗದನ್ನು ಹಾಗೂ ಮಟ್ಕಾ ಚೀಟಿಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ. ಈ ಸಂಬಂಧ ಆರೋಪಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.

ಹೊನ್ನಾಳಿ ಟೌನ್ ನ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮಟ್ಕಾಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ ಹಾಗೂ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದು, ಆರೋಪಿಗಳು, 5210 ರೂ. ನಗದು ವಶಕ್ಕೆ ಪಡೆಯಲಾಗಿದೆ‌‌ ಈ ಸಂಬಂಧ ಆರೋಪಿಗಳ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.

ದಾವಣಗೆರೆ ನಗರದ ಪಿ ಜೆ ಬಡಾವಣೆಯ ಗುರು ಭವನ ರಸ್ತೆ ರತ್ನಮ್ಮ ಹಾಸ್ಟೆಲ್ ಹಳೇ ಕೋರ್ಟ್ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬಡಾವಣೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಮೇಲ್ಕಂಡ ಮಟ್ಕಾ ಜೂಜಾಟದ ಸ್ಥಳದ ಮೇಲೆ ದಾಳಿ ಮಾಡಿದ್ದು, ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿ ಹಾಗೂ 1010 ರೂ. ನಗದು ವಶಕ್ಕೆ ಪಡೆಯಲಾಗಿದೆ.‌ಈ ಸಂಬಂಧ ಆರೋಪಿತನ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.

ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನೀತಿಗೇರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಚನ್ನಗಿರಿ ಪೊಲೀಸ್ ಉಪ ನಿರೀಕ್ಷಕ ಮಹಮ್ಮದ್ ಸೈಪುದ್ದೀನ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವು ಮೇಲ್ಕಂಡ ಜೂಜಾಟದ ಸ್ಥಳದ ಮೇಲೆ ದಾಳಿ ಮಾಡಿದ್ದು, ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 06 ಜನರನ್ನು ವಶಕ್ಕೆ ಪಡೆದು, ಆರೋಪಿಗಳಿಂದ 4400 ರೂ. ನಗದು ಹಾಗೂ ಇಸ್ಪೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *