ಡಿವಿಜಿ ಸುದ್ದಿ, ಮಡಿಕೇರಿ: ನನ್ನ ಮಗಳ ಮದುವೆ ಕಾರ್ಯಕ್ರಮವಿದೆ. ಹೀಗಾಗಿ ಮನೆಯಲ್ಲಿ ಮಗಳ ಮದುವೆ ಕಾರ್ಯಕ್ರಮದಲ್ಲಿ ಬ್ಯುಸಿ ಇದ್ದೇನೆ. ಹೀಗಾಗಿ ನಾನು ಸಂಪುಟ ವಿಸ್ತರಣೆಗೆ ಹೋಗಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು,ಸಂಪುಟ ವಿಸ್ತರಣೆಯನ್ನು ನಮ್ಮ ನಾಯಕರು ಸಮರ್ಥವಾಗಿ ನಿರ್ವಹಿಸಿದ್ದಾರೆ. ಈಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಈಗ ಮೂಲ ಬಿಜೆಪಿಗರು ಹಾಗೂ ವಲಸಿಗರು ಅನ್ನುವ ವ್ಯತ್ಯಾಸವಿಲ್ಲ. ಉಪಮುಖ್ಯಮಂತ್ರಿ ಹುದ್ದೆ ಬಗ್ಗೆ ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಕೊರೊನಾ ವೈಸರ್ ಬಗ್ಗೆ ಆತಂಕ ಬೇಡ
ಕೊರೊನಾ ವೈರಸ್ ಚೀನಾ ದೇಶದಲ್ಲಿ ಆತಂಕ ಮೂಡಿಸುತ್ತಿದೆ. ನಮ್ಮ ದೇಶದ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದಲ್ಲಿ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ಎಲ್ಲವೂ ನೆಗೆಟಿವ್ ಆಗಿ ಬಂದಿದೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದರು.



