ಡಿವಿಜಿ ಸುದ್ದಿ, ಬೆಂಗಳೂರು: ಹೊಸಕೋಟೆ ಉಪ ಚುನಾವಣೆಯಲ್ಲಿ ಸೋತಿರುವ ಎಂಟಿಬಿ ನಾಗರಾಜ್, ಸಂಪುಟ ವಿಸ್ತರಣೆ ಮುನ್ನ ನಮಗೂ ಸಚಿವ ಸ್ಥಾನ ನೀಡಬೇಕು ಎಂದಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್, ಸಂಪುಟ ವಿಸ್ತರಣೆ ನಂತರ ಸೈಲೆಂಟ್ ಆಗಿದ್ದಾರೆ. ನನ್ನನ್ನು ಸಚಿವರನ್ನಾಗಿ ಮಾಡುವುದಾಗಿ ಯಾರು ಮಾತು ಕೊಟ್ಟಿದ್ದಾರೋ, ಅದನ್ನು ಉಳಿಸಿಕೊಳ್ಳುವ ಗುಣ ಯಡಿಯೂರಪ್ಪ ಅವರಲ್ಲಿದೆ. ಮುಂದೊಂದು ದಿನ ನಾನೂ ಸಚಿವನಾಗಲಿದ್ದೇನೆ ಎಂದಿದ್ದಾರೆ.
ಸಂಪುಟ ವಿಸ್ತರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನಗೂ ಮಂತ್ರಿ ಸ್ಥಾನ ಸಿಗಬೇಕು ಎಂಬುದು ನನ್ನ ಕ್ಷೇತ್ರದ ಜನತೆಯ ಬಯಕೆಯಾಗಿತ್ತು. ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಮರೆಯುವರಲ್ಲ. ಕಾರ್ಯಕ್ರಮಕ್ಕೆ ಬರುವಂತೆ ಯಡಿಯೂರಪ್ಪ ಅವರೇ ಆಹ್ವಾನ ನೀಡಿದ್ದರು. ಆದರೆ ಸ್ಥಳೀಯ ಚುನಾವಣೆ ಕಾರಣಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದರು.



