ಎಲ್‌ಪಿಜಿಗೆ ಆಧಾರ್‌ ಜೋಡಣೆ ; ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಎಲ್‌ಪಿಜಿಗೆ ಗ್ರಾಹಕರ ಆಧಾರ್‌ ಸಂಖ್ಯೆ ಜೋಡಣೆ ಕಾರ್ಯ ಮಾಡುತ್ತಿವೆ. ಈ ಪ್ರಕ್ರಿಯೆಗೆ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.

ಎಕ್ಸ್ ನಲ್ಲಿ  ಪ್ರತಿಕ್ರಿಯಿಸಿರುವ ಸಚಿವರು, ಗ್ರಾಹಕರ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ತೈಲ ಕಂಪನಿಗಳ ಬಳಿ ಸಾಕಷ್ಟು ಆಯ್ಕೆಗಳಿವೆ. ಆದರೆ, ಇದನ್ನು ಪೂರ್ಣಗೊಳಿಸಲು ಕಂಪನಿ ಅಥವಾ ಸರ್ಕಾರವು ಯಾವುದೇ ಸಮಯ ನಿಗದಿಪಡಿಸಿಲ್ಲ. ತೈಲ ಕಂಪನಿಗಳು ಕೂಡ ಏಜೆನ್ಸಿಗಳ ವ್ಯಾಪ್ತಿಗೆ ಬರುವ ಗ್ರಾಹಕರ ಸಂಖ್ಯೆಯ ಬಗ್ಗೆ ಮಾಹಿತಿ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ.

ವಾಣಿಜ್ಯ ಸಿಲಿಂಡರ್‌ ಬಳಕೆದಾರರ ಪಟ್ಟಿಯಲ್ಲಿರುವ ಕೆಲವರು ದಿನಬಳಕೆಯ ಸಿಲಿಂಡರ್‌ ಬುಕಿಂಗ್‌ ಮಾಡುತ್ತಾರೆ. ಇಂತಹ ಬಳಕೆದಾರರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಗ್ರಾಹಕರಿಗೆ ನೀಡುವ ಸಬ್ಸಿಡಿ ಸೌಲಭ್ಯ ಪಡೆಯಲು ಎಲ್‌ಪಿಜಿ ಬಳಕೆದಾರರು ಆಧಾರ್‌ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ಗ್ರಾಹಕರು ತೈಲ ಕಂಪನಿಗಳ ಮೊಬೈಲ್‌ ಆಯಪ್‌ ಮೂಲಕವೂ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಗ್ಯಾಸ್‌ ಏಜೆನ್ಸಿ ಕಚೇರಿಗಳಿಗೂ ಭೇಟಿ ನೀಡಬಹುದು ಅಥವಾ ಮನೆಗೆ ಬಾಗಿಲಿಗೆ ಸಿಲಿಂಡರ್‌ ತರುವ ವಿತರಕರಿಗೆ ವಿವರ ನೀಡುವ ಮೂಲಕವೂ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಸಿಲಿಂಡರ್‌ ವಿತರಕರು ಇ-ಕೆವೈಸಿ ಸಂಬಂಧ ಗ್ರಾಹಕರ ನೈಜತೆಯನ್ನು ಪರಿಶೀಲಿಸಬಹುದಾಗಿದೆ. ಅಲ್ಲದೆ, ಸ್ಥಳದಲ್ಲಿಯೇ ಗ್ರಾಹಕರ ಆಧಾರ್‌ ಸಂಖ್ಯೆ ಪಡೆದು ಆಯಪ್‌ನಲ್ಲಿ ಅಪ್‌ಡೇಟ್‌ ಮಾಡಬಹುದಾಗಿದೆ. ಒಟಿಪಿ ಮೂಲಕ ಬಳಕೆದಾರರು ಸ್ಥಳದಲ್ಲಿಯೇ ಈ ಪ್ರಕ್ರಿಯೆಯನ್ನು ಮಾಡಬಹುದಾಗಿದೆ. ಎಲ್‌ಪಿಜಿಗೆ ಗ್ರಾಹಕರ ಆಧಾರ್‌ ಸಂಖ್ಯೆ ಜೋಡಣೆ ಪ್ರಕ್ರಿಯೆಯು ಕಳೆದ ಎಂಟು ತಿಂಗಳಿನಿಂದ ನಡೆಯುತ್ತಿದೆ ಎಂದು

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *