ದಾವಣಗೆರೆ: ಬಸವ, ಅಂಬೇಡ್ಕರ್ ವಸತಿ ಯೋಜನೆ ಮತ್ತು ಸ್ಲಂ ಬೋರ್ಡ್ನಡಿ ದಾವಣಗೆರೆಗೆ 1,500 ಮನೆಗಳು ಮಂಜೂರಾಗಿವೆ. ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆಯಬೇಕು ಎಂದು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿಬಾಯಿಫುಲೆ ಮಹಿಳಾ ಸಂಘಟನೆ ಸಹಯೋಗದಲ್ಲಿ ನಗರದ ರೋಟರಿ ಬಾಲಭವನದಲ್ಲಿ ಕೊಳೆಗೇರಿ ಮಕ್ಕಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರವೇ ನಿಗದಿತ ವೆಚ್ಚದಲ್ಲಿ ಮನೆ ಕಟ್ಟಿಸಿಕೊಡಲಿದೆ. ಫಲಾನುಭವಿಗಳು ಸಣ್ಣ ಮೊತ್ತ ಹಾಕಬೇಕಿದೆ. ಸ್ವಂತ ನಿವೇಶನ ಹೊಂದಿದವರು ನಗರಪಾಲಿಕೆಗೆ ಅರ್ಜಿ ಸಲ್ಲಿಸಬಹುದು.
ಈ ಹಿಂದೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಧಿಯಲ್ಲಿ 15 ಸಾವಿರ ಆಶ್ರಯ ಮನೆಗಳನ್ನು ವಿತರಿಸಲಾಗಿತ್ತು. ಅವುಗಳನ್ನು ಕೆಲವರು ಮಾರಾಟ ಮಾಡಿಕೊಂಡರು. ಆಶ್ರಯ ಮನೆ ಅಥವಾ ನಿವೇಶನಗಳನ್ನು ಹೆಣ್ಣುಮಕ್ಕಳ ಹೆಸರಲ್ಲಿ ನೋಂದಣಿ ಮಾಡಿಸಬೇಕು. ಮಾರಾಟ ತಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿಯಲ್ಲಿ ತೇರ್ಗಡೆಯಾದ ಸ್ಲಂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಇಮ್ತಿಯಾಜ್ ಆರ್. ಮಾನ್ವಿ , ಕೆಪಿಸಿಸಿ ಸಂಚಾಲಕ ಎಸ್.ಎಲ್. ಆನಂದಪ್ಪ, ಸ್ಲಂ ಜನಾಂದೋಲನದ ಅಧ್ಯಕ್ಷ ಎಂ. ಶಬ್ಬೀರ್ಸಾಬ್, ನಿವೇಶನ ರಹಿತರ ಹೋರಾಟ ಸಮಿತಿಯ ಅಧ್ಯಕ್ಷೆ ಮಂಜುಳಾ, ಶಂಷಿದಾ ಬಾನು, ನರಸಿಂಹಮೂರ್ತಿ, ರೇಣುಕಾ ಯಲ್ಲಮ್ಮ ಇಧದರು.



