ದಾವಣಗೆರೆ: ಯುವಕನನ್ನು ಬರ್ಬರವಾಗಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಿನ್ನೆ (ಜು.15) ತಡರಾತ್ರಿ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಾಡಾ ರಸ್ತೆಯ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸಂತೆಬೆನ್ನೂರಿನ ಸಂತೋಷ (32) ಭೀಕರವಾಗಿ ಕೊಲೆಯಾದ ಯುವಕ. ಸಂತೋಷ ಮೇಲೆ ಯುವಕರ ಗುಂಪು ದಾಳಿ ನಡೆಸಿ, ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆಗೆ ಸ್ಪಷ್ಟ ಕಾರಣ ತನಿಖೆಯಿಂದ ಇಳಿಯಬೇಕಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ಭೇಟಿ ಪರಿಶೀಲನೆ ನಡೆಸಿದರು. ಸಂತೆಬೆನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



