Connect with us

Dvgsuddi Kannada | online news portal | Kannada news online

ತುಂಗಭದ್ರಾ ನದಿಯಲ್ಲಿ ಹೆಚ್ಚಿದ ಹರಿವು; ನದಿ ಪಾತ್ರದಲ್ಲಿ ಓಡಾದಂತೆ ಸಾರ್ವಜನಿಕರಿಗೆ ಎಚ್ಚರಿಕೆ; ವಿಪತ್ತು ನಿರ್ವಹಣೆ ಸಿದ್ಧತೆಗೆ ಸೂಚಿಸಿದ ಜಿಲ್ಲಾಧಿಕಾರಿ

davangere dc gangadharaswamy

ದಾವಣಗೆರೆ

ತುಂಗಭದ್ರಾ ನದಿಯಲ್ಲಿ ಹೆಚ್ಚಿದ ಹರಿವು; ನದಿ ಪಾತ್ರದಲ್ಲಿ ಓಡಾದಂತೆ ಸಾರ್ವಜನಿಕರಿಗೆ ಎಚ್ಚರಿಕೆ; ವಿಪತ್ತು ನಿರ್ವಹಣೆ ಸಿದ್ಧತೆಗೆ ಸೂಚಿಸಿದ ಜಿಲ್ಲಾಧಿಕಾರಿ

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ತುಂಗಭದ್ರಾ ನದಿಯಲ್ಲಿನ ನೀರಿನ ಹರಿವು ಹೆಚ್ಚಳವಾಗಿದೆ‌. ನದಿಪಾತ್ರದಲ್ಲಿನ ಜನ, ಜಾನುವಾರುಗಳ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ತುಂಗಾ ಜಲಾಶಯದಿಂದ ಸುಮಾರು 50 ಸಾವಿರ ಕ್ಯೂಸೆಕ್ಸ್ ಗಿಂತಲೂ ಅಧಿಕ ನೀರು ಬಿಡಲಾಗುತ್ತಿದ್ದು ಈ ಪ್ರಮಾಣ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇರುವುದರಿಂದ ಹೊನ್ನಾಳಿಯ ಬಾಲರಾಜ್ ಘಾಟ್ ಬಳಿ ಸಮಸ್ಯೆಯಾಗಲಿದ್ದು ಇಲ್ಲಿನ ಜನರಿಗೆ ತಾತ್ಕಾಲಿಕವಾಗಿ ಕಾಳಜಿ ಕೇಂದ್ರ ತೆರೆಯಲು ಹಾಗೂ ಹರಿಹರದ ಗಂಗಾ ನಗರದ ಬಳಿ ನೀರಿನ ಪ್ರಮಾಣ ಹೆಚ್ಚಳದಿಂದ ಜನರಿಗೆ ತೊಂದರೆಯಾಗಲಿದೆ. ಇಲ್ಲಿನ ಜನರಿಗೆ ತಾತ್ಕಾಲಿಕವಾಗಿ ಎಪಿಎಂಸಿ ಭವನದಲ್ಲಿ ಕಾಳಜಿಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದಾರೆ.

ಹೊನ್ನಾಳಿಯಲ್ಲಿ ವಿಪತ್ತು ನಿರ್ವಹಣೆ ಪರಿಶೀಲನೆಗಾಗಿ ಜುಲೈ 23 ರಂದು ಸಭೆ ಕರೆಯಲಾಗಿದೆ ಮತ್ತು ನದಿಯಲ್ಲಿ ನೀರಿನ ಹರಿವು ಏರಿಕೆಯಾಗುವುದರಿಂದ ವಿಪತ್ತು ನಿರ್ವಹಣಾ ತಂಡವನ್ನು ಸನ್ನದ್ದವಾಗಿಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ನದಿ ಪಾತ್ರದಲ್ಲಿ ಓಡಾಟ ಮಾಡಬಾರದು ಮತ್ತು ಜಾನುವಾರುಗಳನ್ನು ನದಿಗೆ ಇಳಿಸದಂತೆ ನೋಡಿಕೊಳ್ಳಲು ಸೂಚಿಸಿ ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top