ದಾವಣಗೆರೆ: ತುಂಗಭದ್ರಾ ನದಿ ನೀರಲ್ಲಿ ಕೊಚ್ಚಿ ಹೋದ ಯುವಕ; ದನ ಮೈ ತೊಳೆಯಲು ಹೋದಾಗ ನೀರುಪಾಲು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮೈದುಂಬಿ ಹರಿಯುತ್ತಿರುವ ತುಂಗಭದ್ರಾ ನದಿ ಅಪಾಯ ಮಟ್ಟ ಮೀರಿದೆ. ಜಿಲ್ಲೆಯ ಹೊನ್ನಾಳಿ, ಹರಿಹರದಲ್ಲಿ ಹಾಯ್ದು ಹೋಗುವ ತುಂಗಭದ್ರಾ‌ ನದಿ ಉಕ್ಕಿ ಹರಿಯುತ್ತದೆ. ನದಿ ಪಾತ್ರದಲ್ಲಿ ಸಾರ್ವಜನಿಕರು, ದನಕರು ಇಳಿಸದಂತೆ ನೀರಾವರಿ ಇಲಾಖೆ ಆದೇಶ ಹೊರಡಿಸಿದ್ದರೂ, ನದಿಗಿಳಿದು ದನ ಮೈ ತೊಳೆಯಲು ಹೋದ ಯುವಕನೊಬ್ಬ ನೀರಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ‌

ಇಂಗಳಗೊಂದಿ ಜಯಪ್ಪ (32) ನದಿಪಾಲಾದವರು. ದಾವಣಗೆರೆಯ ಹರಿಹರ ತಾಲೂಕಿನ ದೂಳೆಹೊಳೆ ಗ್ರಾಮದ ಬಳಿಯ ತುಂಗಭದ್ರ ನದಿ ಪಾತ್ರದಲ್ಲಿ ಈ ಘಟನೆ ನಡೆದಿದೆ. ಜಯಪ್ಪ ನದಿ ಹರಿವಿನ ಪ್ರಮಾಣ ಹೆಚ್ಚಾಗಿದ್ದನ್ನು ಗಮನಿಸದೆ, ಏಕಾಏಕಿ ಇಳಿದಿದ್ದ. ನದಿಗಿಳಿದು ಜಾನುವಾರುಗಳ ಮೈ ತೊಳೆಯಲು ಮುಂದಾಗಿದ್ದಾಗ, ಇದ್ದಕ್ಕಿದಂತೆ ನೀರಿನ ಸೆಳೆತಕ್ಕೆ‌ ಒಳಗಾಗಿ ನದಿ ಪಾಲಾಗಿದ್ದಾನೆ.

ದೂಳೆಹೊಳೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಮಲೇಬೆನ್ನೂರು‌ ಪೊಲೀಸ್ ಠಾಣೆಯಲ್ಲಿಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *