ಕರ್ನಾಟಕ ನೀರಾವರಿ ತಿದ್ದುಪಡಿ ಮಸೂದೆ ಮಂಡನೆ; ಇನ್ಮುಂದೆ ನಾಲೆಗಳಿಂದ ಅನಧಿಕೃತವಾಗಿ ನೀರೆತ್ತಿದ್ರೆ 2 ವರ್ಷ ಜೈಲು, 2 ಲಕ್ಷದವರಗೆ ದಂಡ..!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ-2024’ನ್ನು ಸೋಮವಾರ ವಿಧಾನಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮಂಡಿಸಿದರು. ಈ ನೂತನ ಕಾಯ್ದೆಯಲ್ಲಿ ಇನ್ಮುಂದೆ ಯಾವುದೇ ನಾಲೆಯಿಂದ ಅನಧಿಕೃತವಾಗಿ ನೀರೆತ್ತುವವರ ವಿರುದ್ಧ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ಹಲವು ಪಟ್ಟು ಹೆಚ್ಚಿಸಿದೆ. ಇದರ ಜತೆಗೆ ನಾಲೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಬರುವ ಕೊಳವೆಬಾವಿ ಮತ್ತಿತರ ಎಲ್ಲ ಪ್ರಕಾರದ ಅಂತರ್ಜಲ ಮೂಲಗಳನ್ನು ನಿಗದಿತ ಅವಧಿಯಲ್ಲಿ ನೋಂದಣಿ ಕಡ್ಡಾಯಗೊಳಿಸಲು ಸರಕಾರ ನಿರ್ಧರಿಸಿದೆ.

ನಾಲೆ, ಕೊಳವೆಯನ್ನು ಚುಚ್ಚುವುದು ಅಥವಾ ಕತ್ತರಿಸುವುದು ಸೇರಿಸುವಂತಹ ಕೃತ್ಯಗಳಿಗೆ ಪ್ರಸ್ತುತ 1 ವರ್ಷದ ಕಾರಾಗೃಹ ಶಿಕ್ಷೆ ಅಥವಾ 1,000 ರೂ. ಜುಲ್ಮಾನೆ ಇದೆ. ಇದಕ್ಕೆ ಸಂಬಂಧಿಸಿದ ಇತರ ಉಲ್ಲಂಘನೆಗಳಿಗೆ ಮತ್ತೆ 2 ತಿಂಗಳು ಸೆರೆವಾಸ ವಿಸ್ತರಣೆ ಅಥವಾ 500 ರೂ. ದಂಡ ಇತ್ತು. ಮಸೂದೆ ಅಂಗೀಕಾರಗೊಂಡ ಅನಂತರ 2 ವರ್ಷ ಜೈಲು ಅಥವಾ 2 ಲಕ್ಷ ರೂ. ದಂಡ ವಿಧಿಸಲಾಗು ತ್ತದೆ. ಇತರ ಉಲ್ಲಂಘನೆಗಳಿದ್ದರೆ 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ, 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *