ದಾವಣಗೆರೆ: ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಸವಳಂಗ ರಸ್ತೆಯಲ್ಲಿ ನಡೆದಿದೆ.
ಶಿಕಾರಿಪುರದ ಪುಷ್ಪ ಶಾಲೆ ಫಾ. ಆಂಥೋಣಿ(51) ಮೃತಪಟ್ಟವರು. ಚಿನ್ನಿಕಟ್ಟೆಯ ಸವಳಂಗ ರಸ್ತೆಯಲ್ಲಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಹೊಡೆದಿವೆ. ಕಾರಿನಲ್ಲಿದ್ದ ಧರ್ಮಗುರು ಆಂಥೋಣಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಸ್ಟೀಫನ್ ಎಂಬವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಥೋಣಿ ಪೀಟರ್ ಶಿಕಾರಿಪುರ ಕಿರಿಯ ಪುಷ್ಪ ಸಂತ ತೆರೆಸಾ ಚರ್ಚ್ ಧರ್ಮ ಗುರುಗಳಾಗಿದ್ದರು. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದೆ.