ದಾವಣಗೆರೆ: ರಾತ್ರಿ ವೇಳೆ ಹಸು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಯಿಂದ 15 ಸಾವಿರ ನಗದು, ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆಯಲಾಗಿದೆ.
ರಾತ್ರಿ ದನದ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ 80,000 ರೂ. ಬೆಲೆಯ 02 ಹಸುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಎಎಸ್ಪಿ ವಿಜಯಕುಮಾರ್ ಎಂ ಸಂತೋಷ, ಡಿವೈಎಸ್ಪಿ ಬಿ.ಎಸ್ ಬಸವರಾಜ್ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಪಿಎಸ್ ಐ ನೇತೃತ್ವದಲ್ಲಿ ಆರೋಪಿತರ ಪತ್ತೆಗೆ ತಂಡ ರಚಿಸಲಾಗಿತ್ತು.
ಮಲೇಬೆನ್ನೂರು ಪೊಲೀಸ್ ಠಾಣೆಯ ಪಿಎಸ್ ಐ ಪ್ರಭು ಡಿ ಕೆಳಗಿನ ಮನಿ ಮತ್ತು ಸಿಬ್ಬಂದಿ ಹರಿಹರದ ಕಡರನಾಯ್ಕನಹಳ್ಳಿ ಗ್ರಾಮದ ಅಲಿಸಾಬ್ @ ಅಲ್ಲಿಸಾಬ್ @ ಮಹಮದ್ ಅಲಿ, (31),ಡ್ರೈವರ್ ಕೆಲಸ ಈತನನ್ನು ಬಂಧಿಸಲಾಗಿದೆ. ಹಸುಗಳನ್ನು ಮಾರಾಟದಿಂದ ಬಂದ ಹಣದಲ್ಲಿ 15,000/- ರೂ ನಗದು ಹಣವನ್ನು ಮತ್ತು ಕೃತ್ಯಕ್ಕೆ ಬಳಸಿದ 2,10,000/- ರೂ ಬೆಲೆಯ ಕೆಎ-17-ಸಿ-5685 ನೇ ಟಾಟಾ ಏಸ್ ಲಗೇಜ್ ವಾಹನವನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ.
ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ (ಕಾ.ಸು) ಶ್ರೀ ಪ್ರಭು ಡಿ ಕೆಳಗಿನ ಮನಿ, ಸಿಬ್ಬಂದಿಯವರಾದ ಫೈರೋಜ್ ಖಾನ್, ವೆಂಕಟರಮಣ, ಲಕ್ಷ್ಮಣ, ರಾಜಶೇಖರ್, ವಿರೇಶ, ಜೀಪ್ ಚಾಲಕ ರಾಜಪ್ಪ ಅವರ ತಂಡ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಈ ಪತ್ತೆ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಸಂಶಿಸಿದ್ದಾರೆ.



