Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ ನದಿ; ಹೊನ್ನಾಳಿಯಲ್ಲಿ ಜನ ವಸತಿ ಪ್ರದೇಶಕ್ಕೆ ನುಗ್ಗಿದ ನೀರು..!!

ದಾವಣಗೆರೆ

ದಾವಣಗೆರೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ ನದಿ; ಹೊನ್ನಾಳಿಯಲ್ಲಿ ಜನ ವಸತಿ ಪ್ರದೇಶಕ್ಕೆ ನುಗ್ಗಿದ ನೀರು..!!

ದಾವಣಗೆರೆ: ತುಂಗಾ ಮತ್ತು ಭದ್ರಾ ಜಲಾಶಯಗಳು ತುಂಬಿದ್ದು, ಎರಡು ಜಲಾಶಯಗಳಿಂದ ನದಿಗೆ ನೀರು‌ ಹೊರ ಬಿಡಲಾಗಿದೆ. ಇದರಿಂದ ತುಂಗಭದ್ರಾ ನದಿಯಲ್ಲಿ ಸುಮಾರು 1.4 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರಯತ್ತುದೆ. ಜಿಲ್ಲೆಯ ಹೊನ್ನಾಳಿ, ಹರಿಹರ ಮೂಲಕ ಹಾಯ್ದು ಹೋಗುವ ತಂಗಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹೊನ್ನಾಳಿಯ ಎರಡು ಜನ ವಸತಿ ಪ್ರದೇಶಗಳಿಗೆ ನದಿ ನೀರು ನುಗ್ಗಿದೆ.

ರಾಘವೇಂದ್ರಸ್ವಾಮಿ ಮಠ ಸಮೀಪದ ವಿಶ್ವೇಶ್ವರ ಶಾಲೆ, ಬಾಲರಾಜ್ ಘಾಟ್‌ನ 20 ಮನೆ ಹಾಗೂ ಬಂಬೂಬಜಾರ್‌ನ 6 ಮನೆಗಳು ಜಲಾವೃತಗೊಂಡಿವೆ. ಜಿಲ್ಲಾಡಳಿದ ಈಗಾಗಲೇ ಮುನ್ನೆಚ್ಚರಿಕೆ ವಹಿಸಿ 20ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಿದೆ. 90 ಜನರಿಗೆ ಅಂಬೇಡ್ಕರ್ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಮುಳುಗಡೆಯಾದ ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಪ್ರಸ್ತುತ ತುಂಗಭದ್ರಾ ನದಿಯಲ್ಲಿ 1.4 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ. ಭದ್ರಾ ಡ್ಯಾಂ ನ ಕ್ರಸ್ಟ್ ಗೇಟ್ ಮೂಲಕ ಇಂದು 39, 362 ಕ್ಯೂಸೆಕ್ ನೀರು ನದಿಗೆ ಹೊರ ಬಿಡಲಾಗಿದೆ. ಸಂಜೆ ವೇಳೆಗೆ ನದಿ ನೀರಿನ ಮಟ್ಟ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top