ದಾವಣಗೆರೆ: ಸರ್ ಎಂವಿ ಕಾಲೇಜ್ ಸ್ಥಳಾಂತರಕ್ಕೆ ಸ್ಥಳೀಯರ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ಉಂಟಾಗುತ್ತಿರುವ ನಗರದ ಶಿವಕುಮಾರಸ್ವಾಮಿ ಬಡಾವಣೆ ಸರ್.ಎಂ.ವಿ. ಕಾಲೇಜ್ ಸ್ಥಳಾಂತರ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಸಣ್ಣ ಮಕ್ಕಳು, ವಯೋವೃದ್ಧರು, ಮಹಿಳೆಯರು,
ಸರಾಗವಾಗಿ ಓಡಾಡಲು ಆಗುತ್ತಿಲ್ಲ. ಎಲ್ಲಿ ನೋಡಿದರೂ ವಿದ್ಯಾರ್ಥಿಗಳ ಗುಂಪು, ಗಲಾಟೆ, ಶಬ್ದ ಇರುತ್ತದೆ. ಕಾಲೇಜಿನ ವಿದ್ಯಾರ್ಥಿಗಳುಕಾಲೇಜಿನ ಅಕ್ಕಪಕ್ಕದಲ್ಲಿರುವ ಮನೆಗಳ ಮುಂದೆ, ಖಾಲಿ ಸೈಟುಗಳಲ್ಲಿ ಓಡಾಡುವ ರಸ್ತೆ ಮುಂದೆ ವಾಹನಗಳನ್ನು ನಿಲ್ಲಿಸಿಕೊಂಡು ಸಂಚಾರಕ್ಕೂ ಅಡ್ಡಿ ಉಂಟು ಮಾಡುತ್ತಿದ್ದಾರೆ. ಗುಟ್ಕಾ ತಿಂದು‌ಎಲ್ಲೆಂದರಲ್ಲಿ ಉಗಿಯುವುದು, ಸೀಗರೇಟ್ ಸೇದುವುದು, ತಿಂಡಿ ಪದಾರ್ಥಗಳನ್ನು ತಿಂದು ಎಲ್ಲೆಂದರಲ್ಲಿ ಖಾಲಿ ಪಾಕೆಟ್‌ಗಳನ್ನು ಎಸೆಯುತ್ತಿದ್ದಾರೆ ಎಂದು ದೂರಿದ್ದಾರೆ

ಕೂಡಲೇ ಕಾಲೇಜು ಸ್ಥಳಾಂತರ ಮಾಡಿ, ಈ ಭಾಗದ ನಾಗರಿಕರು ಆರೋಗ್ಯ ನೆಮ್ಮದಿಯಿಂದ ಬದುಕಲು ಅವಕಾಶ ನೀಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರಾದ ಕೆ.ಹೆಚ್.ಲೋಕೇಶ್, ಡಿ. ರವೀಂದ್ರ, ಪಿ.ಆರ್. ದಿನೇಶ್, ರಾಮಚಂದ್ರ ಶೆಟ್ರು, ನೀಲಕಂಠಪ್ಪ ವಿರೂಪಾಕ್ಷಪ್ಪ, ಕೆ.ಎಸ್. ಸತೀಶ್, ಅಂಕಿತ್ ಮತ್ತಿತರರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *