ದಾವಣಗೆರೆ: ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ಉಂಟಾಗುತ್ತಿರುವ ನಗರದ ಶಿವಕುಮಾರಸ್ವಾಮಿ ಬಡಾವಣೆ ಸರ್.ಎಂ.ವಿ. ಕಾಲೇಜ್ ಸ್ಥಳಾಂತರ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಸಣ್ಣ ಮಕ್ಕಳು, ವಯೋವೃದ್ಧರು, ಮಹಿಳೆಯರು,
ಸರಾಗವಾಗಿ ಓಡಾಡಲು ಆಗುತ್ತಿಲ್ಲ. ಎಲ್ಲಿ ನೋಡಿದರೂ ವಿದ್ಯಾರ್ಥಿಗಳ ಗುಂಪು, ಗಲಾಟೆ, ಶಬ್ದ ಇರುತ್ತದೆ. ಕಾಲೇಜಿನ ವಿದ್ಯಾರ್ಥಿಗಳುಕಾಲೇಜಿನ ಅಕ್ಕಪಕ್ಕದಲ್ಲಿರುವ ಮನೆಗಳ ಮುಂದೆ, ಖಾಲಿ ಸೈಟುಗಳಲ್ಲಿ ಓಡಾಡುವ ರಸ್ತೆ ಮುಂದೆ ವಾಹನಗಳನ್ನು ನಿಲ್ಲಿಸಿಕೊಂಡು ಸಂಚಾರಕ್ಕೂ ಅಡ್ಡಿ ಉಂಟು ಮಾಡುತ್ತಿದ್ದಾರೆ. ಗುಟ್ಕಾ ತಿಂದುಎಲ್ಲೆಂದರಲ್ಲಿ ಉಗಿಯುವುದು, ಸೀಗರೇಟ್ ಸೇದುವುದು, ತಿಂಡಿ ಪದಾರ್ಥಗಳನ್ನು ತಿಂದು ಎಲ್ಲೆಂದರಲ್ಲಿ ಖಾಲಿ ಪಾಕೆಟ್ಗಳನ್ನು ಎಸೆಯುತ್ತಿದ್ದಾರೆ ಎಂದು ದೂರಿದ್ದಾರೆ
ಕೂಡಲೇ ಕಾಲೇಜು ಸ್ಥಳಾಂತರ ಮಾಡಿ, ಈ ಭಾಗದ ನಾಗರಿಕರು ಆರೋಗ್ಯ ನೆಮ್ಮದಿಯಿಂದ ಬದುಕಲು ಅವಕಾಶ ನೀಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರಾದ ಕೆ.ಹೆಚ್.ಲೋಕೇಶ್, ಡಿ. ರವೀಂದ್ರ, ಪಿ.ಆರ್. ದಿನೇಶ್, ರಾಮಚಂದ್ರ ಶೆಟ್ರು, ನೀಲಕಂಠಪ್ಪ ವಿರೂಪಾಕ್ಷಪ್ಪ, ಕೆ.ಎಸ್. ಸತೀಶ್, ಅಂಕಿತ್ ಮತ್ತಿತರರಿದ್ದರು.