ದಾವಣಗೆರೆ: ಜಿಲ್ಲೆಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ಹಾಕಲಾಗಿದೆ.
ಎಸ್ಪಿ ಉಮಾ ಪ್ರಶಾಂತ್ ಸೂಚನೆಯಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ತಂಡಗಳು ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅತೀವೇಗ ಹಾಗೂ ನಿರ್ಲಕ್ಷ್ಯ ದಿಂದ ಚಾಲನೆ ಮಾಡುವ ಬಸ್ ಗಳ ಮೇಲೆ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು. ಈ ವೇಳೆ ಅತೀವೇಗ ಚಾಲನೆ ಮಾಡುವ 09 ಬಸ್ ಗಳ ಮೇಲೆ ಪ್ರಕರಣ ದಾಖಲು ಮಾಡಿ ಕೊಂಡಿದ್ದು, ಒಟ್ಟು 7000 ರೂ. ದಂಡ ವಿಧಿಸಲಾಗಿರುತ್ತದೆ.
ವಾಹನ ಚಾಲಕರುಗಳು ವಾಹನ ಚಾಲನೆ ಮಾಡುವಾಗ ಅತೀವೇಗವಾಗಿ ಹಾಗೂ ನಿರ್ಲಕ್ಷ್ಯ ದಿಂದ ಚಾಲನೆ ಮಾಡಬಾರದು. ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.



