ಬೆಂಗಳೂರು: ಕರ್ನಾಟಕ ವಿಶ್ವಕರ್ಮಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25 ನೇ ಸಾಲಿನ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಸಂಗ ಯೋಜನೆ, ಸ್ವಾತಂತ್ರಯ ಅಮೃತ ಮುನ್ನಡೆ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಬೆಂಗಳೂರು –ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಗಳನ್ನು https://www.kaushalkar.com ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: https://kvcdcl.karnataka.gov.in ಗೆ ಅಥವಾ ನಿಗಮದ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 080-23539601 ಅಥವಾ ಜಿಲ್ಲಾ ವ್ಯಾಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು.



