ದಾವಣಗೆರೆ: ಡಿಸಿಎಂ ಹೇಳಿಕೆಯೇ ಹೊಂದಾಣಿ ರಾಜಕಾರಣಕ್ಕೆ ಸಾಕ್ಷಿ; ಕಾಂಗ್ರೆಸ್ ಭಿಕ್ಷೆಯಲ್ಲಿ ಗೆದ್ದ ವಿಜಯೇಂದ್ರ ರಾಜೀನಾಮೆ ನೀಡಲಿ- ಶಾಸಕ ಹರೀಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇರುವುದು ಸತ್ಯ. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಕಾಂಗ್ರೆಸ್ ಭಿಕ್ಷೆಯಲ್ಲಿ ಗೆದ್ದಿದ್ದಾರೆ. ಆದ್ದರಿಂದ ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಭಿಕ್ಷೆಯಲ್ಲಿ ಇರುವುದು ಬೇಡ, ರಾಜೀನಾಮೆ ನೀಡಿ ಮತ್ತೊಂದು ಬಾರಿ ಗೆದ್ದು ಬರಲಿ. ಶಿವಕುಮಾರ್ ಹೇಳಿಕೆ ನೋಡಿದರೆ‌ ಇದು ಹೊಂದಾಣಿ ರಾಜಕಾರಣಕ್ಕೆ ಸಾಕ್ಷಿ ಅಲ್ಲವೇ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಂದಾಣಿಕೆ ರಾಜಕಾರಣ ಇರುವುದು ಸತ್ಯ. ಪ್ರಸ್ತುತ ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಸ್ವಪಕ್ಷದ ಮುಖಂಡರ ವಿರುದ್ಧ ಹರಿಹಾಯ್ದಿದ್ದಾರೆ

ಮುಡಾ ವಾಲ್ಮೀಕಿ ಹಗರಣದಲ್ಲಿ ರಾಜ್ಯದ ಜನತೆಗೆ ಎಲ್ಲಾ ರಾಜಕಾರಣಿಗಳು ಮೋಸ ಮಾಡಿದ್ದಾರೆ.‌ ವಾಲ್ಮೀಕಿ ನಿಗಮ, ಮುಡಾ ಹಗರಣ ಮಾಡಿಲ್ಲ ಎನ್ನುವುದಕ್ಕಿಂತ ನೀವು ಸಹಭಾಗಿಯಾಗಿಲ್ಲವೇ ಎನ್ನುವ ಮಾತುಗಳೇ ಕೇಳಿ ಬರುತ್ತಿದೆ.ಎಲ್ಲಾ ರಾಜಕೀಯ ನಾಯಕರು ಜನರಿಗೆ ಮಾಡಿದ ದ್ರೋಹಿವಿದು ಎಂದರು.

ಎಲ್ಲಾ ರಾಜಕೀಯ ನಾಯಕರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಇವರ ತಪ್ಪು ಅವರು ಮುಚ್ಚುತ್ತಾರೆ ಅವರದ್ದನ್ನು ಇವರು ಮುಚ್ಚುತ್ತಾರೆ ಇಂದು ಖಂಡನೀಯ. ನಾಚಿಕೆಗೆಟ್ಟವರಂತೆ ಎಲ್ಲಾ ಪಕ್ಷದ ಮುಖಂಡರು ವರ್ತಿಸುತ್ತಿದ್ದಾರೆ.ರಾಜಕೀಯ ಎಂದರೆ ಜನಸಾಮಾನ್ಯರು ಅಸಹ್ಯ ಪಡುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ರಾಜಕಾರಣ ಅಸಹ್ಯದ ಪರಿಸ್ಥಿತಿಯಲ್ಲಿದೆ. ರಾಜಕೀಯ ಅಧಿಕಾರಕ್ಕಾಗಿ ಅಸಹ್ಯಪರಿಸ್ಥಿತಿಗೆ ರಾಜಕಾರಣಿಗಳು ಇಳಿದಿದ್ದಾರೆ‌.

ಇನ್ನು ಕೃಷ್ಣ ಮೃಗ ವಿಚಾರದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ.ಅಸಹಾಯಕ ಪರಿಸ್ಥಿತಿಯಲ್ಲಿ ಜಿಲ್ಲಾ ಸಚಿವರು ಇದ್ದರು.ಆದರೆ ಅವರನ್ನು ಅಂದಿನ‌ ಸಿಎಂ ಬೊಮ್ಮಾಯಿ ರಕ್ಷಣೆ ಮಾಡಿದರು. ಹೊಂದಾಣಿಕೆ ರಾಜಕೀಯ ಇರುವುದರಿಂದಲೇ ಒಬ್ಬರಿಗೊಬ್ಬರು ಕಚ್ಚಾಡುತ್ತಾ ಜನರಿಗೆ ತೋರಿಸುತ್ತಿದ್ದಾರೆಂದರು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕಿಡಿ: ಜಿಲ್ಲಾ ಉಸ್ತುವಾರಿ ಸಚಿವರ ಹರಿಹರ ತಾಲ್ಲೂಕಿನ‌ ಗಡಿಭಾಗದ ಹಳ್ಳಗಳನ್ನು ಮುಚ್ಚಿದ್ದಾರೆ. ಗಡಿಲೈನ್ ಅಳಿಸಿ ಹಾಕಿ ಈ ಅಕ್ರಮವೆಸಗಿದ್ದರು.ಈ ಬಗ್ಗೆ ಅಧಿವೇಶನದಲ್ಲಿ‌ ದನಿ‌ಎತ್ತಿದಾಗ ಎಲ್ಲವೂ‌ ಸರಿಯಿದೆ ಎಂದು ಉತ್ತರ ನೀಡಿದ್ದಾರೆ. ಆದರೀಗ ನನ್ನ ಹೋರಾಟಕ್ಕೆ ಜಯ‌ದೊರೆತಿದೆ ಮೊದಲಿನಂತೆ ನೈಸರ್ಗಿಕ ಹಳ್ಳಗಳನ್ನು ಸರಿಪಡಿಸಲಾಗಿದೆ ಎಂದು‌ ಶಾಸಕ ಬಿ.ಪಿ‌ಹರೀಶ್ ಹೇಳಿದರು. ಜಿಲ್ಲಾ ಸಚಿವರು ಮುಚ್ಚಿರುವ ಹಳ್ಳಗಳನ್ನು ಈಗ ಮೊದಲ‌ಸ್ವರೂಪಕ್ಕೆ ತರಲಾಗಿದೆ .ಸರ್ಕಾರಕ್ಕೆ ಸೇರಿದ ಸುಮಾರು 30 – 40 ಎಕರೆ ಗೋಮಾಳವನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಾರಿ ಜಮೀನಿನಲ್ಲಿ ಕೆರೆ ಮಾಡಿ ಕೊಂಡಿ ದ್ದಾರೆಂದರು. ಇನ್ನು ಮುಂತಾದ ಹಗರಣಗಳನ್ನು ಮುಂದಿನ ದಿನಗಳಲ್ಲಿ ಬಿಚ್ಚಿಡುವೆ ಎಂದು ಎಚ್ಚರಿಕೆ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *