ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರ್ಪಡೆಗೆ ಆನ್ ಲೈನ್ ನಲ್ಲಿ ಈ ರೀತಿ ಮಾಡಿ…!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು 2025 ರ ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಸ್ತುತ 17 ವರ್ಷ ತುಂಬಿದ್ದು 18 ವರ್ಷಗಳಲ್ಲಿ ನಡೆಯುತ್ತಿದ್ದು ಬರುವ ಜನವರಿ 1 ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಬಹುದಾಗಿದೆ. ಹೊಸದಾಗಿ ನೊಂದಾಯಿಸಲು ನಮೂನೆ-6, ಹೆಸರು ಕೈಬಿಡಲು ನಮೂನೆ-7, ತಿದ್ದುಪಡಿ, ಸ್ಥಳಾಂತರ, ವಿಶೇಷ ಚೇತನರ ಗುರುತಿಸುವಿಕೆಗೆ ನಮೂನೆ-8, ವಿದೇಶದಲ್ಲಿ ನೆಲೆಸಿರುವ ಭಾರತೀಯವರು ನಮೂನೆ-6ಎ ರಡಿ ವಿವರವನ್ನು ಭರ್ತಿ ಮಾಡಿ ಮತದಾರರ ನೊಂದಣಾಧಿಕಾರಿಗಳಿಗೆ ನೀಡಬೇಕು.

ವೋಟರ್ ಹೆಲ್ಪ್ ಲೈನ್ ಆಪ್ ಅಥವಾ http;//voters.eci.gov.in/ ವೆಬ್‍ಸೈಟ್ ಮೂಲಕವೂ ನೊಂದಣಿ, ತಿದ್ದುಪಡಿ, ವರ್ಗಾವಣೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇದೆ. ದಾವಣಗೆರೆ ಮತ್ತು ಹೊನ್ನಾಳಿ ಉಪವಿಭಾಗಾಧಿಕಾರಿಗಳು, ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ಮತದಾರರ ನೊಂದಣಾಧಿಕಾರಿಗಳಾಗಿದ್ದು ಆಯಾ ತಾಲ್ಲೂಕಿನ ತಹಶೀಲ್ದಾರರು, ಪಾಲಿಕೆ ಪರಿಷತ್ ಕಾರ್ಯದರ್ಶಿ ಸಹಾಯಕ ಮತದಾರರ ನೊಂದಣಾಧಿಕಾರಿಗಳಾಗಿರುತ್ತಾರೆ.
ಸಂಪರ್ಕಿಸಬೇಕಾದ ತಹಶೀಲ್ದಾರರ ದೂರವಾಣಿ; ಜಗಳೂರು 9164687171, ದಾವಣಗೆರೆ 9108268759, ಹರಿಹರ 9880994147, ಪಾಲಿಕೆ ಕಂದಾಯಾಧಿಕಾರಿ 9901768584, ಪರಿಷತ್ ಕಾರ್ಯದರ್ಶಿ 7892012952, ಚನ್ನಗಿರಿ 9880383519, ಹೊನ್ನಾಳಿ 9480545472 ಮೊಬೈಲ್‍ಗೆ ಕರೆ ಮಾಡಬಹುದಾಗಿದೆ.

ಪರಿಷ್ಕರಣೆ ಅವಧಿ; ಮತದಾರರ ಪಟ್ಟಿಯ ಕರಡು ಪಟ್ಟಿಯನ್ನು 2024 ರ ಅಕ್ಟೋಬರ್ 29 ರಂದು ಪ್ರಕಟಿಸಲಾಗುತ್ತದೆ. ಆಕ್ಷೇಪಣೆಗಳಿದ್ದಲ್ಲಿ 2024 ರ ನವೆಂಬರ್ 28 ರೊಳಗಾಗಿ ಸಲ್ಲಿಸಬಹುದಾಗಿದೆ. ಈ ಅವಧಿಯಲ್ಲಿನ ಎರಡನೇ ಶನಿವಾರ, ಭಾನುವಾರ ರಜಾ ದಿನಗಳಂದು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತದೆ. ಸಲ್ಲಿಕೆಯಾಗುವ ಎಲ್ಲಾ ಆಕ್ಷೇಪಣೆಗಳನ್ನು 2024 ರ ಡಿಸೆಂಬರ್ 24 ರೊಳಗಾಗಿ ಇತ್ಯರ್ಥ ಮಾಡಿ 2025 ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *