ದಾವಣಗೆರೆ: 54 ಎಕರೆ ಮೀಸಲು ಅರಣ್ಯ ಭೂಮಿ ಒತ್ತುವರಿ ತೆರವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಬಳಿಯ ಶೃಂಗಾರ್‌ಬಾಗ್‌ ಮೀಸಲು ಅರಣ್ಯದಲ್ಲಿ ಒತ್ತುವರಿಯಾಗಿದ್ದ 54 ಎಕರೆ ಅರಣ್ಯ ಭೂಮಿಯನ್ಬು ಅರಣ್ಯ ಅಧಿಕಾರಿಗಳು ತೆರವುಗೊಳಿಸಿದರು.

ವಲಯ ಅರಣ್ಯ ಸಂರಕ್ಷಣಾಧಿಕಾರಿ ವಿ.ಜಗದೀಶ್‌ ನೇತೃತ್ವದಲ್ಲಿ ಶೃಂಗಾರ್‌ಬಾಗ್‌ ಹಾಗೂ ಬುಳ್ಳನಾಯಕನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ 54 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಒತ್ತುವರಿ ಮಾಡುತ್ತಿದ್ದ 17 ಜನರಿಗೆ ನೋಟಿಸ್‌ ನೀಡಿದ್ದು, ಒತ್ತುವರಿದಾರರು ಎಸಿಎಫ್‌ ನ್ಯಾಯಾಲಯಕ್ಕೆ ದಾಖಲೆಗಳನ್ನು ಹಾಜರುಪಡಿಸಲು ಸಾಧ್ಯವಾಗಿಲಲ್ಲ. ಈ ಬಗ್ಗೆ ಸುಮೋಟೋ ಕೇಸ್ ದಾಖಲಿಸಿ, ಒತ್ತುವರಿ ತೆರವಿಗೆ ಆದೇಶಿಸಲಾಗಿತ್ತು.

ಶುಕ್ರವಾರ 52 ಎಕರೆ ಒತ್ತುವರಿ ತೆರವಾಗಿದೆ. 2 ಎಕರೆಯಲ್ಲಿ 4 ಕಚ್ಚಾ ಮನೆಗಳಿವೆ. ನಿವಾಸಿಗಳಿಗೆ ತೆರವಿಗೆ ಸಮಯ ನೀಡಲಾಗಿದೆ. ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರತ್ನಪ್ರಭಾ, 15 ಸಿಬ್ಬಂದಿ ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *