ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷ, ಶಾಸಕ ಹಾಗೂ ಸಮಾಜದ ಹಿರಿಯರಾದ ಡಾ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿ ಮಹಾಸಭಾದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಹಾಸಭಾದ ಮುಖ್ಯ ಚುನಾವಣಾಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಹಾಸಭಾದ ರಾಜ್ಯ ಘಟಕದ ನೂತನ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ಚುನಾಯಿತ ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯರಾದ ಅಥಣಿ ಎಸ್.ವೀರಣ್ಣ, ಅಣಬೇರು ರಾಜಣ್ಣ, ಬಿ.ಎಸ್.ಸಚ್ಚಿದಾ ನಂದಮೂರ್ತಿ, ಎಚ್.ಎಂ.ರೇಣುಕ ಪ್ರಸನ್ನ, ಚಿದಾನಂದ ಎಸ್.ಮಠದ, ಕೋರಿ ವಿರುಪಾಕ್ಷಪ್ಪ, ಗಂಗಮ್ಮ ಬಸವರಾಜು, ಚಂದ್ರಕಲಾ ಶ್ರೀಕಂಠಾರಾಧ್ಯ, ರೂಪಶೇಖರ, ಶಂಭು ಉರೇಕೊಂಡಿ, ಬಿ.ಜಿ.ರಮೇಶ, ಡೋಲಿ ಚಂದ್ರು, ಸಮಿತಿ ಸದಸ್ಯರು, ಸೂಚಕರು, ಅನುಮೋದಕರು, ಇತರರು ಇದ್ದರು.

ಮಹಾಸಭಾಗೆ ನಾಮಪತ್ರಗಳನ್ನು ಸಲ್ಲಿಸಲು ಸೆ.11 ಅಂತಿಮ ದಿನವಾಗಿದೆ. ಸೆ.12 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆ.15ರಂದು ನಾಮಪತ್ರ ಹಿಂಪಡೆಯಲು ಅವಕಾಶ ಇದೆ. ಅಗತ್ಯವಿದ್ದಲ್ಲಿ ಸೆ.29ರಂದು ಚುನಾವಣೆ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಉಪ ಚುನಾವಣಾಧಿಕಾರಿ, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಸಿ.ಎಸ್.ವೀರೇಶ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *