ಡಿವಿಜಿ ಸುದ್ದಿ, ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನ ಕಣ್ಣೀರು ಒರೆಸುವ ಸಿಎಂ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಮನೆ ಮನೆಗೆ ಹೋಗಿ ಕಣ್ಣೀರು ಹಾಕುವ ಸಿಎಂ ಆಗಿದ್ರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.
ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರಿಗೆ ಭಾಗ್ಯಲಕ್ಷ್ಮಿ ಯೋಜನೆ, ಮಕ್ಕಳಿಗೆ ಸೈಕಲ್ ಹಾಗು ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆಗಳನ್ನು ಕೊಟ್ಟಂತಹ ಸಿಎಂ ಯಡಿಯೂರಪ್ಪ ಅವರು ರಾಜ್ಯದ ಜನರ ಕಣ್ಣೀರನ್ನು ಒರೆಸುವ ಸಿಎಂ. ಆದರೆ, ಅಧಿಕಾರಕ್ಕಾಗಿ ಜನರ ಮುಂದೆ ಅಳುವವರು ಎಚ್ಡಿಕೆ ಎಂದು ಟೀಕಿಸಿದರು.
ಮಾತಿನ ಮಧ್ಯೆ ಮಿಣಿ ಮಿಣಿ ಎಂದಾಕ್ಷಣ ಕಾರ್ಯಕ್ರಮವೇ ನಗುವಿನಲ್ಲಿ ತೇಲಿತು. ರಾಜೀವ್ ಗಾಂಧಿ, ಇಂದಿರಾ ಗಾಂಧಿ, ರಾಹುಲ್ ಗಾಂಧಿ ಜೈ ಅನ್ನುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಭಾರತ ಮಾತಾಕಿ ಜೈ ಎನ್ನುತ್ತಿದ್ದಾರೆ ಎಂದರು.



