ದಾವಣಗೆರೆ: ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರಿಂದ ಕಲ್ಲುತೂರಾಟ ನಡೆದಿದ್ದು, ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕಲ್ಲು ತೂರಾಟದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗಾಯವಾಗಿದೆ.
ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆಕಾರ್ಯ ನಡೆದಿದೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗಡಿ ಮುಗ್ಗಟ್ಟುಗಳನ್ನ ಪೊಲೀಸರು ಮುಚ್ಚಿಸಿದ್ದಾರೆ. ಶಾಂತಿ ಟಾಕೀಸ್ ರಸ್ತೆ ಹಾಗೂ ಎನ್ ಆರ್ ರಸ್ತೆಯಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.



