Connect with us

Dvgsuddi Kannada | online news portal | Kannada news online

ಕೊಟ್ಟೂರನಲ್ಲಿ ಮುಂದಿನ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ  

ಪ್ರಮುಖ ಸುದ್ದಿ

ಕೊಟ್ಟೂರನಲ್ಲಿ ಮುಂದಿನ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ  

ಡಿವಿಜಿ ಸುದ್ದಿ, ಹಳೇಬೀಡು: ಸಿರಿಗೆರೆಯ ತರಳಬಾಳು ಬೃಹನ್ಮಠದ ಮುಂದಿನ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವು ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆಯಲಿದೆ ಎಂದು ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಘೋಷಿಸಿದರು.

taralabalu sree 1

ಕಳೆದ 9 ದಿನಗಳಿಂದ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಈ ಬಾರಿ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ಅತ್ಯಂತ ಯಶಸ್ವಿಯಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆದಿದೆ. ಮುಂದಿನ ವರ್ಷ ಕೊಟ್ಟೂರಿನಲ್ಲಿ ಆಚರಿಸಲು ತರಳಬಾಳು ಪೀಠ ತೀರ್ಮಾನಿಸಿದೆ ಎಂದು ಘೋಷಿಸಿದಾಗ ಭಕ್ತರು ಹರ್ಷ ವ್ಯಕ್ತಪಡಿಸಿ ಜೈಕಾರ ಕೂಗಿದರು.

ಈ ಬಾರಿ  ಹಳೇಬೀಡಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಿಸಬೇಕು ಎಂದು ಯಾರು ಕೂಡ ಕೇಳಿಕೊಂಡಿರಲಿಲ್ಲ. ಆದರೆ, ಹಿರಿಯ ಶ್ರೀಗಳು ಮೊದಲ ಸಲ ಜಗಳೂರಲ್ಲಿ 1950 ರಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಿಸಿದ್ದರು. ಆದಾದ ನಂತರದ ವರ್ಷವೇ ಹಳೇಬೀಡಿನಲ್ಲಿ ಆಚರಿಸಿದ್ದರು. ಹೀಗಾಗಿ ಹಳೇಬೀಡಿನಲ್ಲಿ ಕಾರ್ಯಕ್ರಮವನ್ನು ಆಚರಿಸಲು ಹಿರಿಯ ಗುರುಗಳ ಆಶೀರ್ವಾದ ಬಲವೇ ನಮಗೆ ಶ್ರೀ ರಕ್ಷೆಯಾಗಿತ್ತು. ಆದರೆ, ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ಇದಕ್ಕೆಲ್ಲ ಕಾರಣ ಮಠದ ಭಕ್ತರು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top