ಡಿವಿಜಿ ಸುದ್ದಿ, ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ನಂತರ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ್ದಾರೆ.
ಜಲ ಸಂಪನ್ಮೂಲ ಖಾತೆ ಮೇಲೆ ಕಣ್ಣು ಇಟ್ಟಿದ್ದ ರಮೇಶ್ ಜಾರಕಿಹೊಳಿಗೆ ನಿರೀಕ್ಷೆಯಂತೆ ಜಲಸಂಪನ್ಮೂಲ ಖಾತೆಯನ್ನೇ ನೀಡಲಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಯನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ತಮ್ಮಲ್ಲಿಯೇ ಇಟ್ಟುಕೊಳ್ಳುವ ಮೂಲಕ ಸೋಮವಾರ ಖಾತೆ ಹಂಚಿಕೆ ಅಂತಿಮಗೊಳಿಸಿದರು.
ಯಾವ ಸಚಿವರಿಗೆ ಯಾವ ಖಾತೆ ಎನ್ನುವುದನ್ನು ನೋಡೋದಾದ್ರೆ…..
ರಮೇಶ್ ಜಾರಕಿಹೊಳಿ – ಜಲಸಂಪನ್ಮೂಲ
ಬಿ.ಸಿ ಪಾಟೀಲ್ – ಅರಣ್ಯ
ಶ್ರೀಮಂತ ಪಾಟೀಲ್ -ಜವಳಿ
ನಾರಾಯಣ ಗೌಡ – ಪೌರಾಡಳಿತ, ತೋಟಗಾರಿಕೆ
ಎಸ್.ಟಿ ಸೋಮಶೇಖರ್ – ಸಹಕಾರ
ಆನಂದ್ ಸಿಂಗ್ -ಆಹಾರ ಮತ್ತು ನಾಗರಿಕ ಪೂರೈಕೆ
ಕೆ. ಗೋಪಾಲಯ್ಯ – ಸಣ್ಣ ಕೈಗಾರಿಕೆ
ಶಿವರಾಂ ಹೆಬ್ಬಾರ್- ಕಾರ್ಮಿಕ
ಕೆ. ಸುಧಾಕರ್ – ವೈದ್ಯಕೀಯ ಶಿಕ್ಷಣ
ಬೈರತಿ ಬಸವರಾಜ್ – ನಗರಾಭಿವೃದ್ಧಿ



