ದಾವಣಗೆರೆ: ಸತತ ಮಳೆಗೆ ಗೋಡೆ ಕುಸಿತ; ವೃದ್ಧ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸತತ ಮಳೆಯಿಂದ ನೆನೆದ ಗೋಡೆ ಕುಸಿದು ವೃದ್ಧರೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಲ್ಲಿ ನಡೆದಿದೆ.

ಕುಳಗಟ್ಟೆ ಬಸವರಾಜಪ್ಪ ಮೃತ ವೃದ್ಧ. ಕಳೆದ ಕಲವು ದಿನದಿಂದ ನಿರಂತರ ಮಳೆಯಿಂದ ಶನಿವಾರ ಬೆಳಗಿನ ಹೊತ್ತಲ್ಲಿ ಮನೆಯ ಗೋಡೆ ಕುಸಿದಿದೆ. ಬಸವರಾಜಪ್ಪ ಮಗ ಹಾಗೂ ಸೊಸೆ ಹೊರಗೆ ಬಂದರು. ಬಸವರಾಜಪ್ಪ ಹೊರಬರುವಾಗಲೇ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ಸ್ಥಳೀಯರು ಕುಸಿದ ಗೋಡೆ ತೆರವುಗೊಳಿಸಿ ಬಸವರಾಜಪ್ಪ ಅವರನ್ನು ಹೊರ ತೆಗೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಬಸವರಾಜಪ್ಪ ಮೃತಪಟ್ಟಿದ್ದರು.

ಸ್ಥಳಕ್ಕೆ ತಹಶೀಲ್ದಾರ್ ರುಕ್ಮಿಣಿ ಬಾಯಿ ಭೇಟಿ ನೀಡಿ ಪರಿಶೀಲಿಸಿದರು. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ನಿಧಿ ಅಡಿಯಲ್ಲಿ 5 ಲಕ್ಷ ಪರಿಹಾರ ಚೆಕ್ ನೀಡಿದರು. ಎಸ್‌ಐ ಜಗದೀಶ್, ಆರ್‌ಐ ಶ್ರೀನಿವಾಸ್ , ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ ಕೃಷ್ಣಮೂರ್ತಿ, ಸದಸ್ಯರಾದ ಜಿ.ಎಸ್. ಶಿವರಾಜ್, ರಹಮತ್ ಉಲ್ಲಾ ಮತ್ತಿತರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *