ದಾವಣಗೆರೆ: ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಉಳಿವು ಮತ್ತು ಪೇಮೆಂಟ್ ಸೀಟ್ ರದ್ದುಪಡಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ನಾಳೆ (ಅ.16) “ದಾವಣಗೆರೆ ಬಂದ್ ” ಕರೆ ನೀಡಿಲಾಗಿದೆ. ಬಲವಂತವಾಗಿ ಶಾಲಾ, ಕಾಲೇಜು, ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ. ಸಾರ್ವಜನಿಕ ಶಾಂತಿಗೆ ಭಂಗ ತಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.
ಈ ಸಂಬಂಧ ವಿವಿಧ ಸಂಘಟನೆಗಳು ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿರುವುದ ತಿಳಿದು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಬಂದ್ ಕರೆ ನೀಡಿದ ಆಯೋಜಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವುದು ಸೂಚನೆ ನೀಡಲಾಗಿದೆ.
- ಬಂದ್ ಕರೆ ಸಂಬಂಧ ಘನ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ
- ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು
- ಬಂದ್ ಸಂಬಂಧ ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ
- ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು
ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ - ರಸ್ತೆ / ಸಾರ್ವಜನಿಕ ಸ್ಥಳಗಳಲ್ಲಿ ಟಯರ್ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶವಿರುವುದಿಲ್ಲ
- ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದಾಗಿ ತಿಳಿಸಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
- ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಪ್ರತಿಭಟನೆ ನಡೆಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದ್ರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದು
ಬಂದ್ ಸಂಬಂಧ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವತಿಯಿಂದ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ.



