ಡಿವಿಜಿ ಸುದ್ದಿ, ಹರಪನಹಳ್ಳಿ : ಹರ ಜಾತ್ರಾ ಮಹೋತ್ಸವದಲ್ಲಿ ಶಾಸಕ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದಿರುವ ಹೇಳಿಕೆಗೆ ಈಗಲೂ ಬದ್ಧವಾಗಿದ್ದು, ಈ ವಿಚಾರದಲ್ಲಿ ನಾವು ಸಮ್ಮನಿರಲ್ಲ, ವೇಟ್ ಅಂಡ್ ಸೀ ಎಂದು ಹರಿಹದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿ ಅವರು, ಹರಜಾತ್ರಾ ಮಹೋತ್ಸವದಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೇಳಿಕೊಂಡಿದ್ದೇನೆ. ನಮ್ಮ ನಿಲುವನ್ನು ಸಮಾಜದವರು ಒಪ್ಪಿಕೊಂಡಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ಸಣ್ಣ, ಪುಟ್ಟ ತಪ್ಪುಗಳು ಆಗಿದ್ದರೆ, ಹೊಟ್ಟೆಗೆ ಹಾಕಿಕೊಳ್ಳಿ ಎಂದು ಈಗಾಗಲೇ ಭಕ್ತರಲ್ಲಿ ಕೇಳಿಕೊಡಿದ್ದೇನೆ. ಇನ್ನು ಪಂಚಮಸಾಲಿ ಸಮಾಜ ಕೂಡಲ ಸಂಗಮ ಪೀಠ ಹಾಗೂ ಹರಿಹರ ಪಂಚಮಸಾಲಿ ಪೀಠ, ಒಂದಾಗುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.
ರಾಜ್ಯ ಸರ್ಕಾರದಲ್ಲಿ ಪಂಚಮಸಾಲಿ ಸಮಾಜವನ್ನು ತುಳಿಯುವ ಯತ್ನ ನಡೆಯುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ 11 ಶಾಸಕರಲ್ಲಿ 10 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ . ಆದರೆ, ಮಹೇಶ್ ಕಮಟಹಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಸರಿಯಲ್ಲ . ಮಹೇಶ್ ಕಮಟಹಳ್ಳಿ ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದು, ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ ಎಂದರು.



