ದಾವಣಗೆರೆ: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ರೈಲಿನಲ್ಲಿ ಬರುತ್ತಿದ್ದ ಯುವಕನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತರುಣ್(17) ಬಂಧಿತ ಬಾಲಕನಾಗಿದ್ದು, ತಮ್ಮ ಅಕ್ಕನ ಮಗು ಗೋಯಲ್(3) ಅಪಹರಿಸಿಕೊಂಡು ಬರುತಗತಿದ್ದನು. ಬೆಂಗಳೂರಿನಲ್ಲಿ ಅಕ್ಕ ವ್ಯಕ್ತಿಯೊಬ್ಬನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡು ಅವನೊಂದಿಗೆ ವಾಸಿಸುತ್ತಿದ್ದಳು.ಈ ವಿಚಾರ ತಮ್ಮನಿಗೆ ಗೊತ್ತಾಗಿದೆ. ಅಕ್ರಮ ಸಂಬಂಧ ಬಿಡುವಂತೆ ಯುವಕ ತಮ್ಮ ಅಕ್ಕನಿಗೆ ಹೇಳಿದ್ದನು. ಆದರೆ ತಮ್ಮನ ಮಾತಿಗೆ ಕಿವಿಗೊಡದೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದಳು. ಇದರಿಂದ ಅಕ್ಕನ ನಡೆ ಬಗ್ಗೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ಯುವಕ ಪರಾರಿಯಾಗಿದ್ದ.
ಆತಂಕಗೊಂಡು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದ ಮಗುವಿನ ತಾಯಿ. ತಕ್ಷಣ ಕಾರ್ಯಪ್ರವೃತ್ತರಾದ ಬೆಂಗಳೂರು ಪೊಲೀಸರು. ಮಗುವಿನೊಂದಿಗೆ ಬಾಲಕ ನಿಜಾಮುದ್ದೀನ್ ಎಕ್ಸ್ಪ್ರೆಸ್ ಟ್ರೈನ್ನಲ್ಲಿ ಪ್ರಯಾಣಿಸುತ್ತಿರುವ ವಿಚಾರ ಗೊತ್ತಾಗಿದೆ. ತಕ್ಷಣ ಬೆಂಗಳೂರು ಪೊಲೀಸರು, ದಾವಣಗೆರೆ ರೈಲ್ವೆ ಆರ್ಪಿಎಫ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಕಾರ್ಯಾಚರಣೆಗೆ ಇಳಿದ ದಾವಣಗೆರೆ ರೈಲ್ವೆ ಇನ್ಸ್ಪೆಕ್ಟರ್ ಎಕೆ ರೆಡ್ಡಿ ಹಾಗೂ ಸಿಬ್ಬಂದಿ, ನಿಜಾಮುದ್ದಿನ್ ಎಕ್ಸ್ಪ್ರೆಸ್ ಟ್ರೈನ್ ಬರುತ್ತಿದ್ದಂತೆ ಪ್ರಯಾಣಿಕರ ತಪಾಸಣೆ ನಡೆಸಿದ್ದಾರೆ. ಟ್ರೈನ್ನಿಂದ ಮಗುವಿನೊಂದಿಗೆ ಕೆಳಗಿಳಿಯುತ್ತಿದ್ದಂತೆ ಯುವಕ ಮತ್ತು ಮಗುವಿನ ರಕ್ಷಣೆ ಮಾಡಿದ್ದಾರೆ.



