ಭತ್ತಕ್ಕೆ 2,300 ರೂ.ಗೆ ಬೆಂಬಲ ಬೆಲೆ ಘೋಷಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಕೇಂದ್ರ ಸರ್ಕಾರ ಭತ್ತಕ್ಕೆ 2,300 ರೂ.ಗೆ ಬೆಂಬಲ ಬೆಲೆ ಘೋಷಣೆ. ಪ್ರತಿ ಕ್ವಿಂಟಾಲ್‌ ಭತ್ತಕ್ಕೆ 1,310 ರೂ.ನಿಂದ 2,300 ರೂ.ಗೆ‌ ಬೆಂಬಲ ಬೆಲೆ ಹೆಚ್ಚಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೇಂದ್ರ ಸರ್ಕಾರದ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಸಹ ಹಾಕಿಕೊಂಡಿದೆ. ಭತ್ತ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 ಎಲ್‌ಎಂಟಿ ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಿದರು.

ಅ. 1ರಂದು 2,700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಒಟ್ಟು 50 ಎಲ್‌ಎಂಟಿ ಭತ್ತವನ್ನು ಸಂಗ್ರಹಿಸಲಾಗಿದೆ. ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ PEG ಯೋಜನೆಯಡಿ 31 ಎಲ್‌ಎಂಟಿ ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದರು.

https://x.com/JoshiPralhad/status/1850492377766506711?t=m1mNGMkIaKtMGCEhoLUAPQ&s=19

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *