ದಾವಣಗೆರೆ: KSRTC ಬಸ್ ಹತ್ತುವ ನೂಕುನುಗ್ಗಲಲ್ಲಿ ಮಹಿಳೆಯರ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 4.50 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಹರ ನಗರದ KSRTC ಬಸ್ ನಿಲ್ದಾಣದಲ್ಲಿ ಪವಿತ್ರ.ಪಿ.ಎಂ ಎಂಬುವವರ ಬಸ್ ಹತ್ತುವಾಗ ಕೊರಳಲ್ಲಿ 35 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ಆರೋಪಿತ ಪತ್ತೆ ಕಾರ್ಯಕ್ಕಾಗಿ ಎಎಸ್ಪಿ ವಿಜಯಕುಮಾರ್ ಎಂ ಸಂತೋಷ ಹಾಗೂ ಮಂಜುನಾಥ ಮತ್ತು ಡಿವೈಎಸ್ಪಿ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಪಿ ಐ ಎಸ್. ದೇವಾನಂದ, ನೇತೃತ್ವದ ಪಿಎಸ್ ಐ ಶ್ರೀಪತಿ ಗಿನ್ನಿ, ವಿಜಯ್.ಜಿ.ಎಸ್ ಹಾಹೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಆರೋಪಿಗಳನ್ನು ಬಂಧಿಸಿದೆ.
ಆರೋಪಿತ ಮಹಿಳೆಯರಾದ 1] ಸುನೀತಾ ಗಂಡ ಸಖಾ (48) , ಮೆಹಂದಿ ಹಾಕುವ ಕೆಲಸ, ವಾಸ: ಕಲ್ಬುರ್ಗಿ, 2 ] ರಾತಿಯಾ ಉಪಾಧ್ಯಾಯ ಗಂಡ ಕೃಷ್ಣ ಉಪಾಧ್ಯಾಯ (40), ಮೆಹಂದಿ ಹಾಕುವ ಕೆಲಸ, ವಾಸ: ಕಲ್ಬುರ್ಗಿ. ಇವರು ದಿನಾಂಕ: 30-10-2024 ರಂದು ಪುನಃ ಕಳ್ಳತನ ಮಾಡಲು ಬಂದಾಗ ಹರಿಹರ ನಗರ ಪೊಲೀಸರು ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹರಿಹರ ನಗರ ಠಾಣೆ ಯಲದಲಿ ದಾಖಲಾಗಿದ್ದ 35 ಗ್ರಾಂ ತೂಕದ ಬಂಗಾರದ ಸರ ಹಾಗೂ ಶಿಕಾರಿಪುರ ನಗರ ಠಾಣೆ ಯಲ್ಲಿ ಕೇಸ್ ನ 30 ಗ್ರಾಂ ತೂಕದ ಬಂಗಾರದ ಸರ ಸೇರಿ ಒಟ್ಟು 4,50,000/- ರೂ ಮೌಲ್ಯದ 65 ಗ್ರಾಂ ತೂಕದ ಬಂಗಾರದ ಆಭರಣ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



