ಡಿವಿಜಿ ಸುದ್ದಿ, ಕೊಪ್ಪಳ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪ ಅಪಘಾತದಲ್ಲಿ ಇಬ್ಬರು ಸಾವನ್ಬಪ್ಪಿದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಚಿವ ಆರ್.ಅಶೋಕ ಅವರ ಪುತ್ರ ವಾಹನ ಚಲಾಯಿಸುತ್ತಿದ್ದ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಆರ್.ಅಶೋಕ ಅವರ ಪುತ್ರ ವಾಹನ ಚಲಾಯಿಸುತ್ತಿದ್ದ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕಾರು ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
6 ಸಾವಿರ ಜನಸ್ನೇಹಿ ಪೊಲೀಸರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಪರಿಶೀಲಿಸಲಾಗುವುದು. ಸರೋಜಿನಿ ಮಹಿಷಿ ವರದಿ ಅನುಷ್ಠಾನ ಕುರಿತು ತೀವ್ರವಾದ ಚರ್ಚೆ ನಡೆಯುತ್ತಿದೆ. ಸರ್ಕಾರ ವರದಿ ಜಾರಿಗೆ ಗಂಭೀರ ಪ್ರಯತ್ನ ನಡೆಸುವುದಾಗಿ ತಿಳಿಸಿದರು.



