ದಾವಣಗೆರೆ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಜನರು ಬಸ್ ಹತ್ತುವಾಗ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಯಿಂದ 5.08 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಶಿಕಾರಿಪುರದ ಬೇಗೂರು ಗ್ರಾಮದ ಗೀತಾ ದಿನಾಂಕ: 31-10-2024 ರಂದು ದಾವಣಗೆರೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ಹೋಗಲು ಬಸ್ ಹತ್ತುತ್ತಿದ್ದಾಗ ತಮ್ಮ ಬ್ಯಾಗ್ನಲ್ಲಿಟ್ಟುಕೊಂಡಿದ್ದ 92,000 ಬೆಲೆಯ 22 ಗ್ರಾಂ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಪ್ರಕಣದ ಆರೋಪಿ ಪತ್ತೆಗಾಗಿ ಎಎಸ್ಪಿಗಳಾದ ವಿಜಯಕುಮಾರ್ ಎಂ.ಸಂತೋ಼ಷ್ ಮತ್ತು ಮಂಜುನಾಥ್ ಹಾಗೂ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ಹೆಚ್.ಎಸ್. ನೇತೃತ್ವದಲ್ಲಿ ಸಿಬ್ಬಂದಿಯನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು.
ಈ ತಂಡವು ದಿ:10.11.2024 ರಂದು ಸಪ್ರಕರಣದ ಆರೋಪಿ ದಾದಾಪೀರ್ (63), ಟೈಲರ್ ಕೆಲಸ, ವಾಸ : ಅಜಾದ್ ನಗರ, ಮಲೇಬೆನ್ನೂರು ನಿವಾಸಿ, ಈತನನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ವಿಚಾರ ಮಾಡಿದಾಗ ಆರೋಪಿತನು ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿಯಿಂದ ಕೆ.ಟಿ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 03 ಕಳ್ಳತನ ಪ್ರಕರಣಗಳು, 2) ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 01 ಕಳ್ಳತನ ಪ್ರಕರಣ, ಒಟ್ಟು 4 ಪ್ರಕರಣಗಳಲ್ಲಿ ಅಂದಾಜು 5,08,000/-ರೂ ಬೆಲೆಯ 98 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಪತ್ತೆ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.



