ದಾವಣಗೆರೆ: ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಜಗರೇಕಟ್ಟೆ ಗ್ರಾಮದ ಶಿರಮನಹಳ್ಳಿ ಕೆಂಚಪ್ಪ ಗಾಂಜಾ ಬೆಳೆದ ವ್ಯಕ್ತಿ. ಕೆಂಚಪ್ಪ ಗ್ರಾಮದ ತಮ್ಮಮನೆಯ ಪಕ್ಕದ ಖಾಲಿ ಜಾಗದಲ್ಲಿ ಕಾನೂನು ಬಾಹಿರವಾಗಿ 6 ಅಡಿ ಎತ್ತರದ ಗಾಂಜಾ ಗಿಡವನ್ನು ಬೆಳೆಸಿದ್ದು, ಖಚಿತ ಮಾಹಿತಿ ಮೇರೆ ಗ್ರಾಮಂತರ ಸಿಪಿಐ ಮಂಜುನಾಥ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.
ತನಿಖಾಧಿಕಾರಿ ಹದಡಿ ಪೊಲೀಸ್ ಠಾಣೆಯ ಪಿಎಸ್ಐ ಪ್ರಸಾದ್ ಪಿ ಅವರು ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು
ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಅವರು ಶಿರಮನಹಳ್ಳಿ ಕೆಂಚಪ್ಪ ಅವರ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.



