ಡಿವಿಜಿ ಸುದ್ದಿ, ಬೀದರ್: ದೇಶದ್ರೋಹದ ಆರೋಪ ಎದುರಿಸುತ್ತಿರುವ ಶಾಹೀನ್ ಶಿಕ್ಷಣ ಸಂಸ್ಥೆಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಲಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳಿಂದ ನಾಟಕ ಮಾಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಅವಮಾನ ಮಾಡಲಾಗಿತ್ತು ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಇದನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನ್ಯೂಟೌನ್ ಠಾಣೆಯಲ್ಲಿ ಜನವರಿ 26ರಂದು ದೂರು ದಾಖಲಿಸಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ಫರಿನಾಭಾನು ಹಾಗೂ ನಾಟಕ ಮಾಡಿದ ವಿದ್ಯಾರ್ಥಿನಿ ತಾಯಿ ನಶೀಮಾ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಈ ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದಿದ್ದು, ಹಲವಾರು ನಾಯಕರು ಶಾಹೀನ್ ಶಿಕ್ಷಣ ಸಂಸ್ಥೆಗೆ ಭೇಟಿ ನೀಡುತ್ತಿದ್ದು, ಇದೀಗ ಸಿದ್ದರಾಮಯ್ಯ ಶಾಹೀನ್ ಶಿಕ್ಷಣ ಸಂಸ್ಥೆ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೀದರ್ ಏರಬೇಸ್ಗೆ ಆಗಮಿಸಿ ಶಾಹೀನ್ ಶಿಕ್ಷಣ ಸಂಸ್ಥೆಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ಧಾರೆ. ಈ ಭೇಟೆಯ ನಂತರ ಸುದ್ದಿಗೋಷ್ಠಿ ಮಾತನಾಡಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕರಾದ ರಾಜಶೇಖರ್ ಪಾಟೀಲ್, ಬಿ.ನಾರಾಯಣ್ ರಾವ್, ರಹೀಂ ಸೇರಿದಂತೆ ಮತ್ತಿತರರು ಸಾಥ್ ನೀಡಲಿದ್ದಾರೆ.



