ದಾವಣಗೆರೆ: ದೂಡಾ ವ್ಯಾಪ್ತಿಯ‌‌ ಕೆರೆ, ಉದ್ಯಾನವನ ಅಭಿವೃದ್ಧಿಪಡಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಹರಿಹರ ನಗರಾಭಿವೃದ್ಧಿ ಪಾಧಿಕಾರ( ದೂಡಾ) ವ್ಯಾಪ್ತಿಯ ಉದ್ಯಾನ, ಕೆರೆಗಳ ಅಭಿವೃದ್ಧಿಪಡಿಸಬೇಕು. ಗಾಂಧಿನಗರ, ಭಾಷಾನಗರ ಸೇರಿ ಎಲ್ಲೆಲ್ಲಿ ಮಳೆ ನೀರು ನಿಂತು ತೊಂದರೆ ಆಗುವುದೆಯೋ, ಅಲ್ಲಲ್ಲಿ ವ್ಯವಸ್ಥಿತ ಕಾಮಗಾರಿ ಮಾಡಿ ನಗರ ಅಭಿವೃದ್ಧಿ ಒತ್ತು‌ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೂಡಾ ಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕುಂದವಾಡ ಕೆರೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ. ಇದೇ ರೀತಿ ಬಾತಿ‌ ಕೆರೆ ಕಾಮಗಾರಿ ಮಾಡದೇ, ಕೆರೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಿ.

ಎಸ್.ಎಸ್.ಎಂ ನಗರದಲ್ಲಿನ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿ ಮಾಡಿ. ಗಾಂಧಿನಗರ ಸಾರ್ವಜನಿಕರ ರುದ್ರಭೂಮಿ ಅವ್ಯವಸ್ಥೆಯಿಂದ ಕೂಡಿದೆ ಎಂದು ಸದಸ್ಯರು ದೂರಿದರು. ಆಗ ಸಚಿವರು, ಅಧಿಕಾರಗಳಿಗೆ ಮಳೆ ನೀರು ನಿಲ್ಲದಂತೆ ನೀಡಿಕೊಳ್ಳುವಂತೆ ಸೂಚಿಸದರು.ಸಭೆಯ ನಂತರ ಸಚಿವರು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಗಂಗಾಧರ ಸ್ವಾಮಿ, ಎಂ.ಎಲ್.ಸಿ ಅಬ್ದುಲ್ ಜಬ್ಬಾರ್, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ದೂಡಾ ಆಯುಕ್ತರ ಹುಲ್ಲುಮನಿ ತಿಪ್ಪಣ್ಣ, ಪಾಲಿಕೆ ಆಯುಕ್ತ ರೇಣುಕಾ, ಹರಿಹರ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ, ಅಧಿಕಾರಿಗಳು ಹಾಗೂ ದೂಡಾ ಸದಸ್ಯರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *