ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನವೆಂಬರ್ 23 ರಂದು ಮತದಾನ ನಡೆಯಲಿದ್ದು ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
- ಎಲ್ಲೆಲ್ಲಿ ಚುನಾವಣೆ..?
- ನ್ಯಾಮತಿ ತಾಲ್ಲೂಕಿನ ಚಿನ್ನಿಕಟ್ಟಿ
- ಹರಿಹರ ತಾಲ್ಲೂಕಿನ ಸಾರಥಿ, ಉಕ್ಕಡಗಾತ್ರಿ
- ದಾವಣಗೆರೆ ತಾಲ್ಲೂಕಿನ ಗೋಪನಾಳ, ಹೆಬ್ಬಾಳು
- ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ, ತಣಿಗೆರೆ, ಬೆಳ್ಳಗನೂರು, ಸಂತೆಬೆನ್ನೂರು
- ಜಗಳೂರು ತಾಲ್ಲೂಕಿನ ಹನುಂತಾಪುರ, ಬಸವನಕೋಟೆ
- ಹೊನ್ನಾಳಿ ತಾಲ್ಲೂಕಿನ ಕುಂದೂರು
ಈ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 23 ರಂದು ಚುನಾವಣೆ ನಡೆಯುವುದರಿಂದ ಆ ದಿನ ಸಂತೆ, ಜಾತ್ರೆಯನ್ನು ನಿಷೇಧಿಸಿಲಾಗಿದೆ.



