Connect with us

Dvgsuddi Kannada | online news portal | Kannada news online

ಪಿಎಸ್ ಐ ಅಮಾನತ್ತುಗೊಂಡಿದ್ದಕ್ಕೆ ಸಾರ್ವಜನಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಯಾಕೆ ಗೊತ್ತಾ..?

ಪ್ರಮುಖ ಸುದ್ದಿ

ಪಿಎಸ್ ಐ ಅಮಾನತ್ತುಗೊಂಡಿದ್ದಕ್ಕೆ ಸಾರ್ವಜನಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಯಾಕೆ ಗೊತ್ತಾ..?

ಡಿವಜಿ ಸುದ್ದಿ, ತುಮಕೂರು: ಅಧಿಕಾರದ ದರ್ಪ, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದೇ ಕರ್ತವ್ಯ ಲೋಪ ಎಸಗಿದ ಪಿಎಸ್ ಐ ಅಮಾನತ್ತು ಮಾಡಿದ್ದನ್ನು ಸಂಭ್ರಮಿಸಿದ ಸಾರ್ವಜನಿಕರು ಪಾಟಾಕಿ ಸಿಡಿಸಿ ಸಹಿ ಹಂಚಿದರು.

ಪಾವಗಡ-ತುಮಕೂರು ಪಟ್ಟಣ ಠಾಣೆಯ ಪಿಎಸ್‍ಐ ರಾಘವೇಂದ್ರ ಅರನ್ನು ಕರ್ತವ್ಯ ಲೋಪ ಎಸಗಿದ್ದರೆಂದು ಅಮಾನತ್ತುಗೊಳಿಸಲಾಗಿದೆ. ಇದರಿಂದ ಕಳೆದ 8 ತಿಂಗಳಿಂದ ರೋಸಿ ಹೋಗಿದ್ದ ಸಾರ್ವಜನಿಕರುಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

people celebration 2

ಪಟ್ಟಣದ ಶನೇಶ್ವರ ದೇವಸ್ಥಾನ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸೇರಿದ ಸಾರ್ವಜನಿಕರು ಪಟಾಕಿ ಸಿಡಿಸಿ ಎಸ್‍ಪಿಗೆ ಜೈಕಾರ ಕೂಗಿ, ರಾಘವೇಂದ್ರಗೆ ಧಿಕ್ಕಾರ ಕೂಗಿದ್ದಾರೆ. ಕಳೆದ 8 ತಿಂಗಳಿನಿಂದ ಪಾವಗಡ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಸಾರ್ವಜನಿಕರ ಜೊತೆ ಅಧಿಕಾರ ದರ್ಪದಿಂದ ನಡೆದುಕೊಳ್ಳುವುದು,  ದೂರುದಾರರ ಮೇಲೆ ದೌರ್ಜನ್ಯ ನಡೆಸಿದ  ಆರೋಪ ಕೇಳಿಬಂದಿತ್ತು.ಪೊಲೀಸ್ ಅಧಿಕಾರಿಯ ಈ ದರ್ಪದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಪಿಎಸ್‍ಐ ರಾಘವೇಂದ್ರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ  ಅಮಾನತುಗೊಳಿಸಿದ್ದಾರೆ.  ಭ್ರಷ್ಟ ಅಧಿಕಾರಿ ವಿರುದ್ಧ  ಖಡಕ್ ತೀರ್ಮಾನ ತೆಗೆದುಕೊಂಡು ಜಿಲ್ಲಾಧಿಕಾರಿಗಳಿಗೆ ಜೈಕಾರ ಕೂಗಿದ್ದಾರೆ.

ಪಾವಗಡ ಪಟ್ಟಣ ಠಾಣೆಯ ಪಿಎಸ್‍ಐ ರಾಘವೇಂದ್ರ ಅವರು ಕರ್ತವ್ಯ ಲೋಪ ಎಸಗಿರುವುದು ಸಾಬೀತಾದಿದೆ.  ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸುಮಾರು ನಾಲ್ಕು ಪ್ರಕರಣಗಳಲ್ಲಿ ದೂರು ದಾಖಲಿಸಿಕೊಳ್ಳದೇ ಅರ್ಜಿದಾರರಿಗೆ ಮೋಸ ಮಾಡುವ ಹುನ್ನಾರ ನಡೆಸಿದ್ದರು ಎನ್ನಲಾಹಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top