ದಾವಣಗೆರೆ: ಕೇಳಿದ ತಕ್ಷಣ ಪೋಷಕರು ಬೈಕ್ ಕೊಡಿಸದಕ್ಕೆ ಮನನೊಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ವಿಕಾಸ್.ಆರ್ (20) ಆತ್ಮಹತ್ಯೆಗೆ ಮಾಡಿಕೊಂಡ ಯುವಕನಾಗಿದ್ದಾನೆ. ವಿಕಾಸ್ ಬೈಕ್ ಕೊಡಿಸುವಂತೆ ತಂದೆಗೆ ಕೇಳುತ್ತಿದ್ದ. ಆದರೆ, ಹಣದ ಸಮಸ್ಯೆಯಿಂದ ಮಗನಿಗೆ ಬೈಕ್ ಕೊಡಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದ ಯುವಕ ಮನೆ ಬಿಟ್ಟು ಸಂಬಂಧಿಕರ ಮನೆಗೆ ಹೋಗಿದ್ದನು.
ಸಂಬಂಧಿಕರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ನ್ಯಾಮತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.