ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನ ಬಹುತೇಕ ಜಿಲ್ಲಯಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕಾಲಿಕ ಮಳೆಯಿಂದ ಭತ್ತ, ರಾಗಿ ಕೊಯ್ಲಿಗೆ ಅಡಚಣೆ ಉಂಟಾಗಿದೆ.
ಬೆಂಗಳೂರು ನಗರ, ಬೆಂ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಡಿ.13 ಮತ್ತು ಡಿ.18ರಂದು ಜೋರು ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಯಲ್ಲಿ ಯೆಲ್ಲೋ ಅರ್ಲಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ಗಂಟೆ ಸಾಧಾರಣ ವರ್ಷಧಾರೆಯಾಗಲಿದೆ. ರಾಜ್ಯದಲ್ಲಿ ಡಿ.15ರಿಂದ ಡಿ.17ರವರೆಗೆ ಒಣಹವೆ ಇರಲಿದ್ದು, ಡಿ.18ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಡಿ.17ರವರೆಗೆ ಒಣಹವೆ ಇರಲಿದೆ.



