ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ತೀವ್ರ ಚಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ರಾಜ್ಯದ ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಡಿ.17ರಿಂದ ಡಿ.19ರವರೆಗೆ ತೀವ್ರ ಶೀತದ ಅಲೆ ಇರಲಿದ್ದು, ರೆಡ್ ಅರ್ಲಟ್ ನೀಡಲಾಗಿದೆ.
ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ಸುರಿದು ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಇದಲ್ಲದೆ, ಮೋಡ ಕವಿದ ವಾತಾವರಣ, ಸೈಕ್ಲೋನ್ ಉಂಟಾದ ಕಾರಣಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ 5-6 ಡಿ.ಸೆ.ಉಷ್ಣಾಂಶ ಇಳಿಕೆಯಾಗಿದೆ.ಇನ್ನೂ ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿನಲ್ಲಿ ಮೂರು ದಿನ ಯೆಲ್ಲೋ ಅರ್ಲಟ್ ನೀಡಲಾಗಿದೆ. ಕೊರೆಯುವ ಚಳಿಯಿಂದ ಈಗಾಗಲೇ ನಡುಗುತ್ತಿರುವ ಜನರು ಅಗತ್ಯ ಎಚ್ಚರಿಕೆವಹಿಸಬೇಕಿದೆ.
ಮತ್ತೆ ಮಳೆ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಡಿ.21ರಿಂದ ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ ಮತ್ತು ವಿಜಯನಗರದಲ್ಲಿ ಡಿ.21ರಿಂದ ಡಿ.23ರವರೆಗೆ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಡಿ.21ರಿಂದ ಮುಂದಿನ 3 ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ.



