ಹಿರೇ ಕೋಗಲೂರು ‌ಗ್ರಾಮದಲ್ಲಿ ಮೆಕ್ಕೆಜೋಳ ರಾಶಿ ಸಂಪೂರ್ಣ ಭಸ್ಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಚನ್ನಗಿರಿ: ತಾಲೂಕಿನ‌ ಹಿರೇ ಕೋಗಲೂರು ‌ಗ್ರಾಮದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ರುದ್ರಮ್ಮ, ಕೋಟ್ಯಪ್ಪ ಎಂಬುವರ ಸರ್ಕಾರಿ ಗೋಮಾಳ ಜಮೀನಿನಲ್ಲಿ‌  ಮಧ್ಯಾಹ್ನ ಯಾರೋ ದುಶ್ಕರ್ಮಿಗಳು‌ ಬೆಂಕಿ ಹಚ್ಚಿದ್ದಾರೆ.  ಇದರಿಂದ  ಸುಮಾರು‌ 1 ಲಕ್ಷದ 55 ಸಾವಿರ ಬೆಲೆಬಾಳುವ ಮೆಕ್ಕೆಜೋಳ ಸುಟ್ಟು ಹೋಗಿದೆ. ವಿಷಯ ತಿಳಿದ ಗ್ರಾಮಸ್ಥರು ಅಗ್ನಿ ಶಾಮಕದಳಕ್ಕೆ  ತಿಳಿಸಿದ್ದಾರೆ. ಕೂಡಲೇ ಬಂದ ಅಗ್ನಿಶಾಮಕದಳ ಬೆಂಕಿಯನ್ನು ನಂದಿಸಿದ್ದಾರೆ .

ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿಯಾದ ಕೆ.ಹೆಚ್. ತಿಲಕ್ ಕುಮಾರ್ ಆಗಮಿಸಿ ಮಹಜರ್ ನಡೆಸಿದರು. ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯುವ ಆರ್ಥಿಕ ನೆರವು ಕೊಡಿಸುವುದಾಗಿ ಭರವಸೆ ನೀಡಿದರು. ಬಿ.ಜಿ ಸ್ವಾಮಿ , ಕೆಪಿ ವೆಂಕಟೇಶ್ , ರವೀಂದ್ರಕುಮಾರ್ , ಶಂಕ್ರಪ್ಪ ಹಾದಿಮನೆ ಸೇರಿದಂತೆ ಇನ್ನಿತರ ಗ್ರಾಮಸ್ಥರು ಬೆಂಕಿಯನ್ನು ನಂದಿಸುವಲ್ಲಿ‌ ಸಹಾಯಕರಾದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *