ಡಿವಿಜಿ ಸುದ್ದಿ, ಚನ್ನಗಿರಿ : ತಾಲೂಕಿನ ಹಿರೇ ಕೋಗಲೂರು ಗ್ರಾಮದ ಬಡ ರೈತರ ಮೆಕ್ಕೆಜೋಳದ ರಾಶಿಗೆ ಶನಿವಾರ ಬೆಂಕಿ ಬಿದ್ದ ಸ್ಥಳಕ್ಕೆ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್ ಭೇಟಿ ನೀಡಿ, ನೊಂದ ರೈತರಿಗೆ ಸಾಂತ್ವನ ಹೇಳಿದರು.

ಸುಮಾರು ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಿಂತ ಹೆಚ್ಚಿನ ಹಾನಿಯಾಗಿದ್ದ ಬಗ್ಗೆ ಮಾಧ್ಯಮದ ಮೂಲಕ ವಿಷಯ ತಿಳಿದು ಬಂದಿದೆ. ಈ ಬಗ್ಗೆ ಸರ್ಕಾರದಿಂದ ಏನು ಪರಿಹಾರ ಕೊಡಿಸಲು ಸಾಧ್ಯವಿದೆಯೋ ಅದನ್ನು ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ವೈಯಕ್ತಿಕವಾಗಿ ತಲಾ ಒಬ್ಬ ರೈತರಿಗೆ ಐದು ಸಾವಿರ ರೂಪಾಯಿ ನೀಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕೆಪಿ ವೆಂಕಟೇಶ್ , ಶಂಕ್ರಪ್ಪ ಹಾದಿಮನೆ , ಶರತ್ , ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.



