ದಾವಣಗೆರೆ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೈಕ್- ಕಾರು ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ನಗರದಲ್ಲಿ ನಿನ್ನೆ (ಡಿ.31) ತಡರಾತ್ರಿ ನಡೆದಿದೆ.
ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತದಲ್ಲಿ ನಡೆದಿದೆ. ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಇನ್ನೊರ್ವನಿಗೆ ಗಂಭೀರವಾಗಿ ಗಾಯಗಳಾಗಿವೆ. ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ. ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್ನಲ್ಲಿ ಬರುತ್ತಿದ್ದಾಗ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ತಿಕ್ ಸಾವನ್ನಪ್ಪಿದ್ದಾನೆ.
ಬೈಕ್ ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ನಡೆಯುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು,ಬೈಕ್ ಸಂಪೂರ್ಣವಾಗಿ ಜಖಂ ಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಮಿಸಿ ತನಿಖೆ ಕೈಗೊಂಡಿದ್ದಾರೆ.



