ದಾವಣಗೆರೆ: ಹೊಸ ವರ್ಷ ಸಂಭ್ರಮಾಚರಣೆ; ತಡರಾತ್ರಿ ಬೈಕ್ – ಕಾರು ಡಿಕ್ಕಿ; ಯುವಕ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೈಕ್- ಕಾರು ಡಿಕ್ಕಿಯಾದ‌ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ನಗರದಲ್ಲಿ ‌ನಿನ್ನೆ (ಡಿ.31) ತಡರಾತ್ರಿ ನಡೆದಿದೆ.

ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ  ಅಪಘಾತದಲ್ಲಿ ನಡೆದಿದೆ. ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಇನ್ನೊರ್ವನಿಗೆ  ಗಂಭೀರವಾಗಿ ಗಾಯಗಳಾಗಿವೆ.‌ ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ. ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ತಿಕ್ ಸಾವನ್ನಪ್ಪಿದ್ದಾನೆ.

ಬೈಕ್ ನ‌ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ನಡೆಯುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು,ಬೈಕ್ ಸಂಪೂರ್ಣವಾಗಿ ಜಖಂ ಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಮಿಸಿ ತನಿಖೆ ಕೈಗೊಂಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *