ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕು ಚನ್ನೇಶಪುರ ಗ್ರಾಮದ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸೋರಿಕೆಯಿಂದ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ತಗುಲಿದ್ದು, ಭಾರಿ ದುರಂತ ತಪ್ಪಿದೆ. ಅದೃಷ್ಟವಶಾತತ್ ತಾಯಿ, ಮಗ ಪಾರಾಗಿದ್ದಾರೆ.
ಚನ್ನೇಶಪುರ ಗ್ರಾಮದ ಕಾಶಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ಸಿಲಿಂಡರ್ ಪೈಪ್ ನಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡ ಕೂಡಲೇ ತಾಯಿ, ಮಗ ಹೊರಗೆ ಓಡಿ ಬಂದಿದ್ದಾರೆ.
ಕಾಶಪ್ಪ ಮತ್ತು ಅವರ ತಾಯಿ ಹೊರಬಂದ ಎರಡೇ ನಿಮಿಷದಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಬೆಂಕಿ ತಗುಲಿದ್ದು, ಇಡಿ ಮನೆ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ನಡೆಸಿದ್ದಾರೆ. ಸ್ಪೋಟ, ಬೆಂಕಿಯಿಂದಾಗಿ ಇಡೀ ಮನೆ ಸುಟ್ಟು ನಾಶವಾಗಿದೆ.
ಸಿಲಿಂಡರ್ ಸ್ಫೋಟದ ಪರಿಣಾಮ ಇಡೀ ಗ್ರಾಮದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದರು. ಅಗ್ನಿಶಾಮಕ ದಳ ಬೆಂಕಿ ನಿಯಂತ್ರಣ ಮಾಡಿ, ಇತರೆ ಮನೆಗಳಿಗೆ ಬೆಂಕಿ ಹರಡದಂತೆ ತಡೆಯಲು ಹರಸಾಹಸ ಪಡಬೇಕಾಯಿತು.ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



