ದಾವಣಗೆರೆ: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ತಿಂಗಳಿಗೆ ರೂ.1500/- ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ.
ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 6 ರಿಂದ 20 ರವರಗೆ ಹಮ್ಮಿಕೊಳ್ಳಲಾಗಿದೆ. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ ಕನಿಷ್ಠ 06 ವರ್ಷಗಳ ವರೆಗೆ ಪದವಿ / ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಧ್ಯಯನ ಮಾಡಿದವರು). ಸ್ವಯಂ ಉದ್ಯೋಗ ಕೈಗೊಳ್ಳದಿರುವ ಅಭ್ಯರ್ಥಿಗಳು ಮತ್ತು ಉನ್ನತ ವ್ಯಾಸಂಗ ಮುಂದುವರಿಸದೇ ಇರುವ ಅಭ್ಯರ್ಥಿಗಳಾಗಿರಬೇಕು.
ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ತಿಂಗಳ 01 ರಿಂದ 25ನೇ ತಾರೀಖಿನೊಳಗೆ ನಿರುದ್ಯೋಗಿ ಎಂದು ಸ್ವಯಂ ಘೋಷಣೆಯನ್ನು ಆನ್ ಲೈನ್ ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.sevasindhugs.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



