ದಾವಣಗೆರೆ: ಹರಿಹರ ಶಾಸಕ ಯಾವಾಗ ಯಾರ ಕಡೆ ಇರ್ತಾರೆ ಗೊತ್ತಿಲ್ಲ. ಮಾಧ್ಯಮದಲ್ಲಿ ತಮ್ಮ ಫೋಟೋಗೋಸ್ಕಾರ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿರಬೇಕು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ರೇಣುಕಾಚಾರ್ಯ ಮತ್ತು ಇತರು ಹೊಂದಾಣಿಕೆ ಮಾಡಿಕೊಂಡು ಬಿಜೆಪಿ ಅಭ್ಯರ್ಥಿ ಸೋಲಿಸಿದ್ದಾರೆ ಎಂಬ ಶಾಸಕ ಬಿ.ಪಿ.ಹರೀಶ್ ಹೇಳಿಕೆಗೆ ಪ್ರತಿಕಿರಿಸಿದ್ದಾರೆ. ಅವರಿಗೆ ತಲೆ ಸರಿ ಇದೆಯೋ, ಇಲ್ಲವೋ ಗೊತ್ತಿಲ್ಲ. ಶಾಸಕರಿಗೆ ತಲೆ ಕೆಟ್ಟಿರಬೇಕು ಎಂದರು.
ಈ ಹಿಂದೆ ಇದೇ ಹರೀಶ್ ನಮ್ಮ ಮನೆಗೆ ಬಂದು ಸಿದ್ದೇಶ್ವರ್ ಅವರಿಗೆ ಬಾಯಿಗೆ ಬಂದ ಹಾಗೆ ಬೈದು ಕಾಂಗ್ರೆಸ್ ಸೇರಿದ್ದ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಈಗ ಪ್ರಚಾರಕ್ಕೆ ಏನೇನು ಮಾತಡ್ತಾರೆ. ಜನ ಆಯ್ಕೆ ಮಾಡಿ ಕಲಿಸಿದ್ದಾರೆ. ಜನ ಸೇವೆಯನ್ನು ಮಾಡಲಿ ಎಂದು ಕಿವಿ ಮಾತು ಹೇಳಿದರು.